ಕುಶಾಲನಗರ, ಫೆ. ೨೭ : ಕುಶಾಲನಗರ ಸಮೀಪದ ಗಂಧದಕೋಟೆ ಅಂಗನವಾಡಿ ಕೇಂದ್ರದಲ್ಲಿ ಜಾನಪದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಗಂಧದಕೋಟೆ ಅಂಗನವಾಡಿ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಸೋಮವಾರಪೇಟೆ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸಾವಿತ್ರಮ್ಮ ಕಾರ್ಯಕ್ರಮ ಉದ್ಘಾಟಿಸಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಪೋಷಣ್ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯತಿ ಸದಸ್ಯೆ ಗಂಗಮ್ಮ, ಜಿಲ್ಲೆಯ ಕನ್ನಡ ಜಾಗೃತಿ ಸಮಿತಿ ನಾಮ ನಿರ್ದೇಶಿತ ಸದಸ್ಯ ಈ ರಾಜು, ಅಂಗನವಾಡಿ ಕಾರ್ಯಕರ್ತೆ ಬಿ.ಕೆ. ಶಾರದಾ, ಕಾರ್ಯಕರ್ತೆ ಪವಿತ್ರ‍್ರ ಉಪಸ್ಥಿತರಿದ್ದರು.