*ಗೋಣಿಕೊಪ್ಪಲು, ಮಾ. ೬: ಅರುವತ್ತೊಕ್ಲು ಮೈಸೂರಮ್ಮ ನಗರದಲ್ಲಿ ವಿದ್ಯುತ್ ಸಮಸ್ಯೆ ಕಾಡುತ್ತಿದೆ. ತಕ್ಷಣವೇ ಟ್ರಾನ್ಸ್ಫಾರ್ಮರ್ ಅಳವಡಿಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಬೇಕೆಂದು ಸ್ಥಳೀಯ ನಿವಾಸಿಗಳು ಚೆಸ್ಕಾಂ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದರು.

ಗೋಣಿಕೊಪ್ಪಲು ವಿದ್ಯುತ್ ಇಲಾಖೆ ಆವರಣದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮೈಸೂರಮ್ಮ ನಗರದ ನಿವಾಸಿಗಳು ಸಮಸ್ಯೆಗಳ ಬಗ್ಗೆ ತಿಳಿಸಿದರು. ವರ್ಷದಲ್ಲಿ ಕನಿಷ್ಟ ನಾಲ್ಕೆöÊದು ಬಾರಿ ಟ್ರಾನ್ಸ್ಫಾರ್ಮರ್ ದುರಸ್ಥಿಗೆ ಬರುತ್ತಿದೆ. ಇದರಿಂದ ವಿದ್ಯುತ್ ಸಮಸ್ಯೆ ಕಾಡುತ್ತಿದೆ. ನೂತನ ಟ್ರಾನ್ಸ್ಫಾರ್ಮರ್ ಅಳವಡಿಸುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆAದು ಮನವಿ ಮಾಡಿದರು.

ಜನರ ಬೇಡಿಕೆಗೆ ಸ್ಪಂದಿಸಿದ ಚೆಸ್ಕಾಂ ಅಧಿಕಾರಿ ನೀಲ್‌ಶೆಟ್ಟಿ ತಕ್ಷಣವೇ ವಿದ್ಯುತ್ ಮಾರ್ಗವನ್ನು ಬದಲಾಯಿಸಿ ನೂತನ ಟ್ರಾನ್ಸ್ಫಾರ್ಮರ್ ಅಳವಡಿಸ ಲಾಗುವುದು. ಒಂದು ವಾರದ ಒಳಗೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡುವುದಾಗಿ ಈ ಸಂದರ್ಭ ಭರವಸೆ ನೀಡಿದರು.