ಸಿದ್ದಾಪುರ, ಮಾ ೬: ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯ ಗುಹ್ಯ ಸಿದ್ದಾಪುರ ಸಂಪರ್ಕ ರಸ್ತೆಯ ಕಾಮಗಾರಿ ಪೂರ್ಣಗೊಂಡಿದ್ದು, ಶಾಸಕ ಕೆ.ಜಿ ಬೋಪಯ್ಯ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಈಗಾಗಲೇ ಸರ್ಕಾರದ ಅನುದಾನದಿಂದ ಗ್ರಾಮೀಣ ಪ್ರದೇಶದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಕೊರೊನಾ ವೈರಸ್ ಸಮಸ್ಯೆಯಿಂದಾಗಿ ವಿಳಂಬವಾಗಿದ್ದ ಕಾಮಗಾರಿಗಳಿಗೆ ಹೆಚ್ಚು ಅನುದಾನ ಬಿಡುಗಡೆಗೊಳಿಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದರು. ಗುಹ್ಯ ಗ್ರಾಮದಲ್ಲಿ ಕೆಲ ವ್ಯಕ್ತಿಗಳು ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದು ತನ್ನ ಗಮನಕ್ಕೆ ಬಂದಿದ್ದು, ಲಾರಿಗಳಲ್ಲಿ ಮಿತಿ ಮೀರಿ ಮರಳು ತುಂಬಿಸಿ ರಸ್ತೆಗಳಲ್ಲಿ ಸಂಚರಿಸುತ್ತಿರುವ ವಾಹನಗಳ ಬಗ್ಗೆ ಪೊಲೀಸ್ ಇಲಾಖೆಯು ಅಗತ್ಯ ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಿದರು. ಅಲ್ಲದೇ ಅನುಮತಿ ಇಲ್ಲದೇ ನದಿಗಳಿಂದ ಮರಳು ತೆಗೆದು ಸಾಗಾಟ ಮಾಡುವುದಕ್ಕೆ ಕಡಿವಾಣ ಹಾಕಬೇಕು ಎಂದು ಹೇಳಿದರು.

ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷೆ ತೀತಮಾಡ ರೀನಾ ತುಳಸಿ, ಉಪಾಧ್ಯಕ್ಷ ಮಹೇಶ್ ಕುಮಾರ್, ಗ್ರಾ.ಪಂ. ಸದಸ್ಯರುಗಳಾದ ಎಂ.ಎ. ಆನಂದ, ಪೂರ್ಣಿಮಾ ರವಿ, ಅಭಿತ ಗಿರೀಶ್, ಲೋಕೇಶ್, ಪ್ರೇಮ, ಸುಳ್ಳೆಕೋಡಿ ಜಯಂತ್, ರೇಖಾ ರೈ, ಅನಿಲ್, ಉಷಾ, ಧನಲಕ್ಷಿö್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್, ಬಿಜೆಪಿ ಪಕ್ಷದ ಪ್ರಮುಖರಾದ ಬಿ.ಕೆ. ಅನಿಲ್ ಶೆಟ್ಟಿ, ಪ್ರವೀಣ್, ಶಾಜಿ, ರೂಪೇಶ್, ರಾಜೇಶ್, ರವಿ, ಮಹೇಶ್, ಹೊಸ್ಕೇರಿ ಗ್ರಾ.ಪಂ. ಅಧ್ಯಕ್ಷ ಬಿ.ವೈ ಪ್ರಭು ಶೇಖರ್, ಇನ್ನಿತರರು ಹಾಜರಿದ್ದರು.