ಮಡಿಕೇರಿ, ಮಾ. ೩೧: ಕೊಡಗು ಜಿಲ್ಲೆಯ ವಿಶ್ವ ಹಿಂದೂ ಪರಿಷದ್‌ನ್ನು ಇನ್ನಷ್ಟು ಸಕ್ರಿಯಗೊಳಿಸುವ ದೃಷ್ಟಿಯಿಂದ ಜಿಲ್ಲಾ ಸಮಿತಿಯನ್ನು ತಾತ್ಕಾಲಿಕವಾಗಿ ವಿಸರ್ಜಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತದ ವಿಭಾಗ ಕಾರ್ಯದರ್ಶಿ ಶ್ರೀಶರಣ್ ಪಂಪವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಂದಿನ ಹೊಸ ಸಮಿತಿಯ ಘೋಷಣೆಯಾಗುವವರೆಗೆ ಜಿಲ್ಲಾ ಸಮಿತಿಯಲ್ಲಿ ವಿಶ್ವಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿಯ ಯಾರಿಗೂ ಯಾವುದೇ ಜವಾಬ್ದಾರಿ ಇರುವುದಿಲ್ಲ. ವಿಶ್ವಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿಯ ತಾಲೂಕು, ವಲಯ, ಗ್ರಾಮ ಮತ್ತು ಘಟಕ ಮಟ್ಟದ ಸಮಿತಿಗಳು ಎಂದಿನAತೆ ಕಾರ್ಯನಿರ್ವಹಿಸುತ್ತಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಮಡಿಕೇರಿಯ ಭಾರತೀಯ ವಿದ್ಯಾಭವನದಲ್ಲಿ ಮಾರ್ಚ್ ೩೦ ರಂದು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಸಂಘಟನಾ ಕಾರ್ಯದರ್ಶಿಗಳಾದ ಬಸವರಾಜ್ ಜೀ ಅವರ ಉಪಸ್ಥಿತಿಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದ್ದು, ಶೀಘ್ರವೇ ಹೊಸ ಜಿಲ್ಲಾ ಸಮಿತಿಯನ್ನು ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.