ಕುಶಾಲನಗರ, ಏ. ೨: ಕುಶಾಲನಗರದಲ್ಲಿ ಡಿವೈಎಸ್ಪಿ ಆಗಿ ಸೇವೆ ಸಲ್ಲಿಸಿ ಇದೀಗ ಬೆಂಗಳೂರು ಸಿಐಡಿ ಅಪರಾಧ ವಿಭಾಗದಲ್ಲಿ ಡಿವೈಎಸ್ಪಿ ಆಗಿರುವ ಪಿ.ಕೆ.ಮುರಳೀಧರ್ ಅವರು ೨೦೨೦ ರ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.

ಕೊಡಗು ಜಿಲ್ಲೆಯ ಜಿಲ್ಲಾ ಅಪರಾಧ ವಿಭಾಗದಲ್ಲಿ ಅಧಿಕಾರಿಯಾಗಿ ಇವರು ಸೇವೆ ಸಲ್ಲಿಸಿದ್ದಾರೆ. ಅತ್ಯುತ್ತಮ ಸಾಧನೆ ಪರಿಗಣಿಸಿ ಮುಖ್ಯಮಂತ್ರಿ ಪದಕಕ್ಕೆ ಭಾಜನರಾದ ಮುರಳೀಧರ್ ಮೂಲತಃ ಭಾಗಮಂಡಲ ನಿವಾಸಿಯಾಗಿದ್ದಾರೆ.