ಮಡಿಕೇರಿ, ಏ.೨; ಇಲ್ಲಿನ ಕಾನ್ವೆಂಟ್ ರಸ್ತೆಯಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಿಯ ೧೫ನೇ ವಾರ್ಷಿಕೋತ್ಸವ ಇಂದು ಶ್ರದ್ಧಾ ಭಕ್ತಿಯಿಂದ ನೆರವೇರಿತು. ಬೆಳಿಗ್ಗೆಯಿಂದ ಗುರುಗಣಪತಿ ಹೋಮ, ಪುಣ್ಯಾಹ, ನಾಂದಿ, ಸಂಕಲ್ಪ, ಗಣಪತಿ ಹೋಮ, ಶಾಂತಿ ಹೋಮ, ಪೂರ್ಣಾಹುತಿ, ಕಲಶಾಭಿಷೇಕದೊಂದಿಗೆ ಮಧ್ಯಾಹ್ನ ಮಹಾಪೂಜೆ , ಪ್ರಸಾದ ವಿತರಣೆ ನಡೆಯಿತು. ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ವಿಜಯ ವಿನಾಯಕ ದೇವಾಲಯದ ಪ್ರಧಾನ ಅರ್ಚಕ ಶ್ರೀಕೃಷ್ಣ ಉಪಾಧ್ಯಾಯ ನೇತೃತ್ವದಲ್ಲಿ ಪೂಜಾದಿ ಕಾರ್ಯಗಳು ನೆರವೇರಿದವು. ಶ್ರೀ ಚಾಮುಂಡೇಶ್ವರಿ ದೇವಿ ಸೇವಾ ಸಮಿತಿ ಆಡಳಿತಮಂಡಳಿಯವರು, ಸದಸ್ಯರುಗಳು ಸೇವಾಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.