ಗುಡ್ಡೆಹೊಸೂರು, ಏ. ೧: ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ವಿವಿಧ ದೈವಗಳ ಕೋಲ ನಡೆಯಿತು. ಶ್ರೀ ವಿಷ್ಣುಮೂರ್ತಿ, ಪಾಷಾಣಮೂರ್ತಿ ಮತ್ತು ರುದ್ರ ಚಾಮುಂಡಿ ದೈವಗಳ ಕೋಲ ನಡೆಯಿತು. ಕೊಡಗಿನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಕ್ತರು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಮೂರು ದಿನಗಳ ಕಾಲ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.