ಭಾಗಮಂಡಲ, ಏ. ೪: ಇಲ್ಲಿನ ಗೌಡ ಸಮಾಜದಲ್ಲಿ ರಾಜ್ಯ ಮತ್ತು ಜಿಲ್ಲಾ ಬಿಜೆಪಿ ಪ್ರಮುಖರ ನೇತೃತ್ವದಲ್ಲಿ ತಾ. ೫ ರಂದು (ಇಂದು) ಬಿಜೆಪಿ ಸಂಘಟನಾ ಸಮಾವೇಶ ನಡೆಯಲಿದೆ ಎಂದು ಭಾಗಮಂಡಲ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಪಿ.ಎಂ. ರಾಜೀವ್ ತಿಳಿಸಿದ್ದಾರೆ.

ಈ ಸಂಬAಧ ಮಾಹಿತಿ ನೀಡಿದ ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ ಭಾಗಮಂಡಲ ವ್ಯಾಪ್ತಿಯಲ್ಲಿ ಪ್ರಬಲವಾಗಿದ್ದ ಜೆಡಿಎಸ್ ಪಕ್ಷದ ಪ್ರಮುಖ ಹೊಸೂರು ಸತೀಶ್ ಕುಮಾರ್ ಕೆಲವು ಪಕ್ಷದ ಬೆಂಬಲಿಗರೊAದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಜೊತೆಗೆ ಕಾಂಗ್ರೆಸ್ ಪಕ್ಷದ ಕೆಲವು ಪ್ರಮುಖರು ಕೂಡ ಸೇರಲಿದ್ದು, ಒಂದೇ ವೇದಿಕೆಯಲ್ಲಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವ ವಿ. ಸೋಮಣ್ಣ, ಶಿಕ್ಷಣ ಸಚಿವ ಸುರೇಶ್‌ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್, ಸಂಸದ ಪ್ರತಾಪ್‌ಸಿಂಹ, ಶಾಸಕರಾದ ಅಪ್ಪಚುರಂಜನ್, ಕೆ.ಜಿ. ಬೋಪಯ್ಯ, ಎಂಎಲ್‌ಸಿ ಸುನಿಲ್ ಸುಬ್ರಮಣಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ.