ಶನಿವಾರಸಂತೆ, ಏ. ೭: ಸಮೀಪದ ಕೊಡ್ಲಿಪೇಟೆ ವೀರಶೈವ ಸಮಾಜ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಸಹಭಾಗಿತ್ವದಲ್ಲಿ ಸ್ಥಳೀಯ ಬಸವೇಶ್ವರ ದೇವಾಲಯದಲ್ಲಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ ಜನ್ಮೋತ್ಸವ ಹಾಗೂ ಜಗದ್ಗುರು ರೇಣುಕಾಚಾರ್ಯರ ಯುಗಮಾನೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಮಾತನಾಡಿ, ಡಾ. ಶಿವಕುಮಾರ ಸ್ವಾಮೀಜಿ ಸರಳ ಜೀವನಕ್ಕೆ ಮಾದರಿಯಾಗಿದ್ದರು. ಅವರ ಆದರ್ಶ, ನೇರ ನಡೆ, ನುಡಿ ಹಾಗೂ ನಿಸ್ವಾರ್ಥ ಸೇವೆ ಸಮಾಜಕ್ಕೆ ದಾರಿ ದೀಪವಾಗಿದೆ ಎಂದರು.

ತೆAಕಲಗೋಡು ಮಠದ ಚೆನ್ನಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವೀರಶೈವ ಸಮಾಜಕ್ಕೆ ಜಗದ್ಗುರು ರೇಣುಕಾಚಾರ್ಯರು ಕೊಡುಗೆ ಅಪಾರವಾಗಿದ್ದು ಅವರು ಸಿದ್ಧಾಂತ ಶಿಖಾಮಣಿಯಾಗಿದ್ದರು ಎಂದರು.

ಕಲ್ಲುಮಠಾಧೀಶ ಮಹಾಂತ ಸ್ವಾಮೀಜಿ, ಕಲ್ಲಳ್ಳಿ ಮಠಾಧೀಶ ರುದ್ರಮುನಿಸ್ವಾಮೀಜಿ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಕಾರ್ಯದರ್ಶಿ ರಾಜೇಶ್ವರಿ ನಾಗರಾಜ್ ದಿನದ ಮಹತ್ವದ ಕುರಿತು ಮಾತನಾಡಿದರು.

ವೀರಶೈವ ಮಹಾಸಭಾದ ಜಿಲ್ಲಾ ಅಧ್ಯಕ್ಷೆ ಮಮತಾ ಸತೀಶ್, ಕಾರ್ಯದರ್ಶಿ ರಾಧಾ, ಉಪಾಧ್ಯಕ್ಷ ಜಿ.ಎಂ. ಕಾಂತರಾಜ್, ತಾಲೂಕು ಅಧ್ಯಕ್ಷ ಹಾಲಪ್ಪ, ಕೊಡ್ಲಿಪೇಟೆ ಹೋಬಳಿ ಅಧ್ಯಕ್ಷ ಬಿ.ಕೆ. ಯತೀಶ್, ಮುಖಂಡ ಶಂಭುಲಿAಗಪ್ಪ ಇತರರು ಉಪಸ್ಥಿತರಿದ್ದರು.