ನಾಪೋಕ್ಲು, ಏ. ೮ : ತೋಟಗಾರಿಕೆ ಬಳಿಯಿಂದ ಬೇತು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ತೀರ ಹದಗೆಟ್ಟಿದ್ದು ಸಂಚರಿಸಲಾಗದ ಪರಿಸ್ಥಿತಿಯಲ್ಲಿದೆ. ಈ ರಸ್ತೆ ಕಳೆದ ೧೦ ವರ್ಷಗಳಿಂದ ದುಸ್ಥಿತಿಯಲ್ಲಿರುವುದರಿಂದ ಶೀಘ್ರ ದುರಸ್ತಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ರಸ್ತೆಯು ಗುಂಡಿಗಳಿAದ ತುಂಬಿದ್ದು ದುರಸ್ತಿಗೆ ಹಲವಾರು ಬಾರಿ ಜನಪ್ರತಿನಿಧಿಗಳ ಗಮನ ಸೆಳೆದರು ಇದುವರೆಗೂ ಯಾವುದೇ ಸ್ಪಂದನ ದೊರೆತಿಲ್ಲ. ಮಳೆಗಾಲ ಸಮೀಪಿಸುತ್ತಿದ್ದು ಸಂಬAಧಪಟ್ಟವರು ಕೂಡಲೇ ಈ ರಸ್ತೆಯನ್ನು ದುರಸ್ತಿ ಪಡಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.