ಸೋಮವಾರಪೇಟೆ, ಏ. ೭: ಪೊಲೀಸ್ ಠಾಣೆಯ ವತಿಯಿಂದ ಮೋಟಾರು, ಆಟೋ ಚಾಲಕರು ಹಾಗೂ ಸಾರ್ವಜನಿಕರ ಸಂಪರ್ಕ ಸಭೆ ಇಲ್ಲಿನ ಪತ್ರಿಕಾ ಭವನದಲ್ಲಿ ನಡೆಯಿತು.

ಠಾಣಾಧಿಕಾರಿ ಶ್ರೀಧರ್ ಮಾತನಾಡಿ, ವಾಹನ ಚಾಲಕರು ಹಾಗೂ ಮೋಟಾರ್ ಚಾಲಕರು ಜನಸಾಮಾನ್ಯರೊಂದಿಗೆ ಶಾಂತ ರೀತಿಯಾಗಿ ವರ್ತಿಸಬೇಕು. ವಾಹನ ಚಾಲಕರು ತಮ್ಮ ವಾಹನದ ದಾಖಲಾತಿಯನ್ನು ವಾಹನಗಳಲ್ಲಿ ಇರಿಸಿಕೊಂಡು ವಾಹನ ಚಾಲನೆ ಮಾಡಬೇಕು ಎಂದು ಹೇಳಿದರು.

ಇದೇ ಸಂದರ್ಭ ಆಟೋ ಚಾಲಕರ ಸಂಘದ ಅಧ್ಯಕ್ಷ ಆರ್. ಮೋಹನ್ ಮಾತನಾಡಿ, ಕೆಲವು ರಸ್ತೆಗಳಲ್ಲಿ ಎರಡೂ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಂಚಾರಕ್ಕೆ ತೊಂದರೆಯಾಗಿದೆ. ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.

ವೇದಿಕೆಯಲ್ಲಿ ಮೋಟಾರ್ ಚಾಲಕರ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ, ದಲಿತ ಸಂಘರ್ಷ ಸಮಿತಿಯ ಮುಖಂಡ ಹೊನ್ನಪ್ಪ ಇದ್ದರು.