ಸುಂಟಿಕೊಪ್ಪ: ಬಿಜೆಪಿ ಸಂಸ್ಥಾಪನಾ ದಿನದ ಅಂಗವಾಗಿ ಸುಂಟಿಕೊಪ್ಪದ ಶಕ್ತಿ ಕೇಂದ್ರದ ವತಿಯಿಂದ ಬಿಜೆಪಿ ಕಾರ್ಯಕರ್ತರ ಮನೆಯಲ್ಲಿ ಪಕ್ಷದ ಧ್ವಜವನ್ನು ಹಾರಿಸಿ ಸಂಸ್ಥಾಪನ ದಿನವನ್ನು ಆಚರಿಸಲಾಯಿತು.

ನಂತರ ಶ್ರೀರಾಮ ಮಂದಿರದಲ್ಲಿ ಆಯೋಜಿಸಲಾದ ಸಭೆಯಲ್ಲಿ ತಾಲೂಕು ಪಂಚಾಯಿತಿ ಸದಸ್ಯೆ ವಿಮಲಾವತಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ಪಿ.ಆರ್. ಸುನಿಲ್‌ಕುಮಾರ್ ದಿನದ ಮಹತ್ವದ ಬಗ್ಗೆ ಮಾತನಾಡಿದರು.

ಶಕ್ತಿ ಕೇಂದ್ರದ ಪ್ರಮುಖ್ ಬಿ.ಕೆ. ಪ್ರಶಾಂತ್, ವಾಸುದೇವ್, ಸಹ ಪ್ರಮುಖ್ ಪ್ರಶಾಂತ್, ಯುವ ಮೋರ್ಚಾ ಅಧ್ಯಕ್ಷ ವಿಘ್ನೇಶ್, ಜಿಲ್ಲಾ ಯುವ ಮೋರ್ಚಾ ಸದಸ್ಯ ಪುನೀತ್‌ಕುಮಾರ್, ಗ್ರಾ.ಪಂ. ಸದಸ್ಯರುಗಳಾದ ಶಾಂತಿ, ವಸಂತಿ ಹಾಗೂ ಪಕ್ಷದ ಕಾರ್ಯಕರ್ತರುಗಳಾದ ಅಶೋಕ್, ಕನೀಶ್, ಶಾನ, ನಿವೃತ್ತ ಅಂಗನವಾಡಿ ಶಿಕ್ಷಕಿ ಶಾಂತಿ ಮತ್ತಿತರರು ಇದ್ದರು.ಮಡಿಕೇರಿ: ಹಿಲ್ ರಸ್ತೆಯಲ್ಲಿ ಬಿಜೆಪಿ ಸಂಸ್ಥಾಪನಾ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಕಿಶೋರ್, ಶಿವಪ್ರಸಾದ್, ಸುಕುಮಾರ್, ಸಂತೋಷ್ ನಾಗರಾಜ್, ಹರೀಶ್, ಮಹೇಶ್ ಹಾಗೂ ಇನ್ನಿತರರು ಹಾಜರಿದ್ದರು.*ಗೋಣಿಕೊಪ್ಪಲು: ಅರುವತ್ತೊಕ್ಲು ಶಕ್ತಿ ಕೇಂದ್ರದ ವತಿಯಿಂದ ಭಾರತೀಯ ಜನತಾ ಪಕ್ಷದ ಸಂಸ್ಥಾಪನ ದಿನಾಚರಣೆಯನ್ನು ಆಚರಿಸಲಾಯಿತು. ಅರುವತ್ತೊಕ್ಲು ಬಿಜೆಪಿ ಸಂಸ್ಥಾಪಕರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ, ಡಾ. ಶ್ಯಾಮ್‌ಪ್ರಸಾದ್ ಮುಖರ್ಜಿ ಇವರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

ಅರುವತ್ತೊಕ್ಲು ಶಕ್ತಿ ಕೇಂದ್ರದ ಪ್ರಮುಖ್ ಮನೆಯಪಂಡ ಕುಶಾಲಪ್ಪ, ಅರುವತ್ತೊಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮನೆಯಪಂಡ ಸೋಮಣ್ಣ, ಗ್ರಾ.ಪಂ. ಸದಸ್ಯರುಗಳಾದ ರಮ್ಯ, ಮನೆಯಪಂಡ ಪ್ರಾಣ್ ಬೋಪಣ್ಣ, ಮಹಿಳಾ ಮೋರ್ಚಾ ಅಧ್ಯಕ್ಷ ರಶ್ಮಿ ದೇವಯ್ಯ, ಕೃಷಿ ಮೋರ್ಚಾ ಹೊಟ್ಟೆಂಗಡ ಗಜೇಂದ್ರ, ಯುವ ಮೋರ್ಚಾ ಅಧ್ಯಕ್ಷ ಅಭಿಷೇಕ್, ಪ್ರಮುಖರಾದ ಸಾಜಿ, ರೇವತಿ ಹಾಗೂ ಶಕ್ತಿ ಕೇಂದ್ರದ ಕಾರ್ಯದರ್ಶಿಗಳು, ಮಹಿಳಾ ಮೋರ್ಚಾ ಕಾರ್ಯದರ್ಶಿಗಳು, ಯುವ ಮೋರ್ಚಾದ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು ಹಾಜರಿದ್ದರು.