ಸೋಮವಾರಪೇಟೆ, ಏ. ೧೨: ಇಲ್ಲಿನ ಶ್ರೀಮುತ್ತಪ್ಪಸ್ವಾಮಿ ಮತ್ತು ಅಯ್ಯಪ್ಪಸ್ವಾಮಿ ದೇವಾಲಯದ ಆವರಣದಲ್ಲಿ ರೂ. ೧೮ ಲಕ್ಷ ವೆಚ್ಚದಲ್ಲಿ ನಿರ್ಮಿಸುವ ಅನ್ನದಾನ ಮಂಟಪದ ಭೂಮಿ ಪೂಜೆಯನ್ನು ಅಧ್ಯಕ್ಷ ಎನ್.ಡಿ. ವಿನೋದ್ ಮತ್ತು ಮಾಜಿ ಅಧ್ಯಕ್ಷರುಗಳಾದ ಆರ್.ಸಿ. ಗಣೇಶ್, ಬಿ.ಎ. ಭಾಸ್ಕರ್, ಎನ್.ಎನ್. ದಯಾನಂದ ಮತ್ತು ಎನ್.ಜಿ. ಜನಾರ್ಧನ್ ನೆರವೇರಿಸಿದರು. ಈ ಸಂದರ್ಭ ಅಧ್ಯಕ್ಷ ವಿನೋದ್ ಮಾತನಾಡಿ, ಮಳೆಗಾಲ ಆರಂಭಕ್ಕೂ ಮುನ್ನಾ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ದೇವಾಲಯದಲ್ಲಿ ಭಕ್ತಾದಿಗಳಿಗೆ ಅನ್ನದಾನಕ್ಕೆ ಸೂಕ್ತ ವ್ಯವಸ್ಥೆಯಿಲ್ಲದ್ದನ್ನು ಮನಗಂಡು ಈ ನಿರ್ಣಯ ಕೈಗೊಳ್ಳಲಾಗಿದೆ ಎಂದರು. ಈ ಸಂದರ್ಭ ದೇವಾಲಯ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.