ಮಡಿಕೇರಿ, ಏ.೧೨: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಐಗೂರು ಅರೆಭಾಷೆ ಗೌಡ ಸಮಾಜ ಇವರ ಸಹಯೋಗದಲ್ಲಿ ತಾ. ೧೫ ರಿಂದ ೧೭ ರವರೆಗೆ ಐಗೂರು ಅರೆಭಾಷೆ ಗೌಡ ಸಮಾಜ ಸಭಾಂಗಣದಲ್ಲಿ ಅರೆಭಾಷೆ ಸಂಸ್ಕೃತಿ ಶಿಬಿರ ನಡೆಯಲಿದೆ. ತಾ. ೧೫ ರಂದು ಬೆಳಗ್ಗೆ ೯.೩೦ ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಐಗೂರು ಅರೆಭಾಷೆ ಗೌಡ ಸಮಾಜದ ಅಧ್ಯಕ್ಷ ಕಡ್ಲೇರ ಹೊನ್ನಪ್ಪ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜೆಗದ್ದೆ, ಮೀನುಗಾರಿಕೆ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕಿ ಮಿಲನ ಕೆ.ಭರತ್, ಅರೆಭಾಷೆ ಗೌಡ ಸಮಾಜದ ಗೌರವ ಅಧ್ಯಕ್ಷ ಪೊನ್ನಚ್ಚನ ಗಣಪತಿ ಇತರರು ಪಾಲ್ಗೊಳ್ಳಲಿದ್ದಾರೆ. ತಾ. ೧೭ ರಂದು ಮಧ್ಯಾಹ್ನ ೩ ಗಂಟೆಗೆ ಅರೆಭಾಷೆ ಗೌಡ ಸಮಾಜ ಸಭಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.