*ಸಿದ್ದಾಪುರ, ಏ.೧೨ : ನೆಲ್ಯಹುದಿಕೇರಿಯ ಶ್ರೀಮುತ್ತಪ್ಪ ದೇವಾಲಯದಲ್ಲಿ ೨೮ ನೇ ವರ್ಷದ ತೆರೆ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.

ಅಲಂಕಾರ, ಅಭಿಷೇಕ, ಅರ್ಚನೆ, ವಿಶೇಷ ಪ್ರಾರ್ಥನೆಯೊಂದಿಗೆ ನಡೆದ ಉತ್ಸವದಲ್ಲಿ ತೆರೆಗಳು ವಿಜೃಂಭಿಸಿದವು. ಭಕ್ತರಿಗೆ ಅನ್ನದಾನದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಹಿರಿಯರಾದ ತೋಟಂಬೈಲು ತಿಮ್ಮಯ್ಯ ಅವರು ಉತ್ಸವಕ್ಕೆ ಚಾಲನೆ ನೀಡಿದರು. ದೇವಾಲಯದ ಅಧ್ಯಕ್ಷ ಪಾಲಚಂಡ ಚೀಯಣ್ಣ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ಸೃಜನ್, ತಾ.ಪಂ ಮಾಜಿ ಅಧ್ಯಕ್ಷ ವಿ.ಕೆ.ಲೋಕೇಶ್, ಪ್ರಮುಖರಾದ ಟಿ.ಸಿ.ಅಶೋಕ್, ಟಿ.ಸಿ.ರಾಮನ್ ಶೆಟ್ಟಿ ಮತ್ತಿತರರು ಹಾಜರಿದ್ದರು.