ಶಾಸಕ ಕೆ.ಜಿ. ಬೋಪಯ್ಯ ಅವರು ನಡಾವಳಿ ದಾಖಲಿಸದಿರುವ ಬಗ್ಗೆ ಆಕ್ಷೇಪಿಸಿದ ಸಂದರ್ಭ, ಅಪರ ಜಿಲ್ಲಾಧಿಕಾರಿ ವಿರುದ್ಧ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಗರಂ ಆದರು.

ಕಳೆದ ಸಭೆಯ ನಡಾವಳಿ ಪ್ರಸ್ತುತ ಸಭೆಯಲ್ಲಿ ಚರ್ಚೆಯಾಗಬೇಕು. ಅದು ಅನುಷ್ಠಾನವಾಗಬೇಕು. ಅಧಿಕಾರಿಗಳು ಇಂತಹ ಸಂದರ್ಭದಲ್ಲಿ ಏನು ಮಾಡುತ್ತಿದ್ದೀರ. ಟಾಸ್ಕ್ ಫೋರ್ಸ್ ಸಭೆಯನ್ನು ಲಘುವಾಗಿ ತೆಗೆದುಕೊಂಡರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ನೀವೇನೂ ಕತ್ತೆ ಮೇಯಿಸಲು ಬಂದಿದ್ದೀರ ಎಂದು ಹೇಳಿ ಮತ್ತೊಂದು ಅವಾಚ್ಯ ಶಬ್ಧದಿಂದ ನಿಂದಿಸಿದರು.