ಮಡಿಕೇರಿ, ಮೇ ೧೭: ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಶುಕ್ರವಾರ ಜೂಮ್ ಆ್ಯಪ್ ಮೂಲಕ ವೀಡಿಯೋ ಸಂವಾದ ಸಭೆ ನಡೆಸಿದರು. ಜಿಲ್ಲೆಯ ಎಲ್ಲಾ ಹಿರಿಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ಅವರು ವೀಡಿಯೋ ಸಂವಾದ ನಡೆಸಿ ಹಲವು ಸೂಚನೆ ನೀಡಿದರು.

ಕಳೆದ ಮೂರು ವರ್ಷಗಳಲ್ಲಿ ಆಗಸ್ಟ್ ಮೊದಲ ಮತ್ತು ಎರಡನೇ ವಾರದಲ್ಲಿ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಉಂಟಾಗಿತ್ತು, ಆದ್ದರಿಂದ ಪ್ರಾಕೃತಿಕ ಹಾನಿ ತಪ್ಪಿಸುವ ನಿಟ್ಟಿನಲ್ಲಿ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ವಹಿಸುವಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತರಾಗಬೇಕಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ನಿರ್ದೇಶನ ನೀಡಿದರು.

ಪ್ರಮುಖವಾಗಿ ಗುಡ್ಡಕುಸಿತ ಉಂಟಾಗುವ ಪ್ರದೇಶಗಳ ಮೇಲೆ ನಿಗಾವಹಿಸಬೇಕಿದೆ. ಅಗತ್ಯವಿದ್ದಲ್ಲಿ ಸ್ಥಳೀಯ ಜನರನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸುವ ಸಂಬAಧ ಮುಂಚಿತವಾಗಿ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ತಾಲೂಕು ಮಟ್ಟದಲ್ಲಿ ತಹಶೀಲ್ದಾರರು, ಸ್ಥಳೀಯ ನೋಡಲ್ ಅಧಿಕಾರಿಗಳ ಸಹಾಯದೊಂದಿಗೆ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು. ಯಾವುದೇ ಘಟನೆ ಬಗ್ಗೆ ನೇರವಾಗಿ ದೂರವಾಣಿ ಮೂಲಕ ಮಾಹಿತಿ ನೀಡುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸನ್ನದ್ಧವಾಗಿ ಕಾರ್ಯನಿರ್ವಹಿಸಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ನಿಯೋಜಿತ ನೋಡಲ್ ಅಧಿಕಾರಿಗಳು ಮತ್ತು ಎಲ್ಲಾ ಅಧಿಕಾರಿ/ ಸಿಬ್ಬಂದಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಸಕಲ ತಯಾರಿ ಮಾಡಿಕೊಳ್ಳುವಂತೆ ಚಾರುಲತ ಸೋಮಲ್ ಅವರು ಸೂಚಿಸಿದರು.

ತಹಶೀಲ್ದಾರ್ ಯೋಗಾನಂದ, ಗೋವಿಂದರಾಜು, ಪ್ರಕಾಶ್ ಅವರು ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜಿ.ಪಂ.ಉಪ ಕಾರ್ಯದರ್ಶಿ ಲಕ್ಷಿö್ಮ, ಉಪ ವಿಭಾಗಾಧಿಕಾರಿ ಶ್ರೀನಿವಾಸ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಚಂದನ್, ಪೌರಾಯುಕ್ತರಾದ ರಾಮದಾಸ್, ಲೋಕೋಪಯೋಗಿ, ಜಿ.ಪಂ., ಸೆಸ್ಕ್ ಎಂಜಿನಿಯರ್‌ಗಳು ಇತರರು ಇದ್ದರು