ಕೂಡಿಗೆ, ಮೇ ೨೧: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ತೋಟಗಾರಿಕಾ ಇಲಾಖೆಯ ವತಿಯಿಂದ ಮುಂದಿನ ತಿಂಗಳುಗಳಲ್ಲಿ ರೈತರಿಗೆ ವಿತರಣೆ ಮಾಡಲು ತೆಂಗಿನ ಗಿಡಗಳು ಸಿದ್ಧಗೊಂಡಿವೆ.

ರಾಜ್ಯ ಸರ್ಕಾರದ ಅಧೀನದಲ್ಲಿರುವ ಹಾರಂಗಿ ತೋಟಗಾರಿಕಾ ಕ್ಷೇತ್ರದಲ್ಲಿ ರಾಜ್ಯ ವಲಯದ ನಿಯಮದಂತೆ ೧೩,೫೦೦ ಸಾವಿರ ತೆಂಗಿನ ಗಿಡಗಳನ್ನು ಬೆಳೆಸಲಾಗಿದೆ. ಮುಂದಿನ ಜೂನ್ ತಿಂಗಳಲ್ಲಿ ಸರಕಾರದ ಆದೇಶದಂತೆ ನಿಗದಿ ಮಾಡಿದ ದರದಂತೆ ಜಿಲ್ಲೆಯ ರೈತರಿಗೆ ವಿತರಣೆ ಮಾಡಲಾಗುತ್ತದೆ ಎಂದು ಹಾರಂಗಿ ತೋಟಗಾರಿಕಾ ಕ್ಷೇತ್ರದ ಸಹಾಯಕ ನಿರ್ದೇಶಕ ವರದರಾಜ್ ತಿಳಿಸಿದ್ದಾರೆ.