ಗೋಣಿಕೊಪ್ಪಲು, ಮೇ ೨೫: ಪೌರಕಾರ್ಮಿಕರು ತಮ್ಮ ಆರೋಗ್ಯ ಕಡೆ ಹೆಚ್ಚಿನ ನಿಗಾ ವಹಿಸುವಂತೆ ಗೋಣಿಕೊಪ್ಪದ ಜಿ.ಪಂ. ಮಾಜಿ ಸದಸ್ಯ ಸಿ.ಕೆ. ಬೋಪಣ್ಣ ಹೇಳಿದರು.

ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಪೌರಕಾರ್ಮಿಕರಿಗೆ ಉಚಿತವಾಗಿ ಆಹಾರ ಕಿಟ್ ವಿತರಿಸಿದ ಇವರು ಪ್ರತಿದಿನ ಗ್ರಾಮದ ಶುಚಿತ್ವ ಕೆಲಸ ಮಾಡುವ ತಾವುಗಳು ಇದೀಗ ಕೋವಿಡ್ ಸಮಯದಲ್ಲಿ ಅತ್ಯಂತ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು,

ಕೆಲಸ ಮುಗಿದ ನಂತರದಲ್ಲಿ ಮನೆಯಲ್ಲಿಯೇ ವಿಶ್ರಾಂತಿ ಪಡೆಯಬೇಕು ಎಂದು ಸಲಹೆ ನೀಡಿದರು. ಜಿ.ಪಂ. ವ್ಯಾಪ್ತಿಯಲ್ಲಿ ಬರುವ ಅರುವತೊಕ್ಕಲು, ಹಾತೂರು, ಅತ್ತೂರು ಹಾಗೂ ಗೋಣಿಕೊಪ್ಪ ವ್ಯಾಪ್ತಿಯಲ್ಲಿರುವ ಕೋವಿಡ್ ಸೋಂಕಿತ ಮನೆಗಳಿಗೆ, ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ, ವಿಶೇಷ ಚೇತನರಿಗೆ, ವೃದ್ಧರ ಕುಟುಂಬಗಳಿಗೆ ಉಚಿತ ಆಹಾರ ಕಿಟ್ ಹಾಗೂ ಮೊಟ್ಟೆಯನ್ನು ವಿತರಿಸಿದರು.

ಈ ವೇಳೆ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಪಿಡಿಒ ತಿಮ್ಮಯ್ಯ, ಕಾರ್ಯದರ್ಶಿ ಪ್ರಕಾಶ್, ಆಟೋ ಸಂಘದ ಅಧ್ಯಕ್ಷ ಜಪ್ಪು ಸುಬ್ಬಯ್ಯ, ಸ್ಥಳೀಯರಾದ ತಸ್ಲೀಂ, ಅರುವತೊಕ್ಕಲು ಗ್ರಾಮ ಪಂಚಾಯಿತಿ ಸದಸ್ಯ ನವೀನ್ ಮುಂತಾದವರು ಹಾಜರಿದ್ದರು. - ಹೆಚ್.ಕೆ. ಜಗದೀಶ್