ಮಡಿಕೇರಿ, ಜೂ. ೭: ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಅವರು ಮಡಿಕೇರಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕೋವಿಡ್ ಸೋಂಕು ನಿಯಂತ್ರಣ ಸಂಬAಧ ಪರಿಶೀಲನೆ ನಡೆಸಿದರು.
ತಾಲೂಕಿನ ಕೆ. ನಿಡುಗಡೆ, ಹೊಸ್ಕೇರಿ, ಮರಗೋಡು, ಮಕ್ಕಂದೂರು, ಕಡಗದಾಳು, ಗಾಳಿಬೀಡು ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ಮಾಡಿ ಪಂಚಾಯಿತಿಯ ಅಧ್ಯಕ್ಷರು, ಪಿಡಿಓ ಹಾಗೂ ಸದಸ್ಯರೊಂದಿಗೆ ಗ್ರಾಮ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಗ್ರಾಮ ಪಂಚಾಯಿತಿಗಳಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಗ್ರಾ.ಪಂ. ಕೆಲಸ ಮಾಡಬೇಕು. ಸರ್ಕಾರದ ಕೋವಿಡ್ ಮಾರ್ಗಸೂಚಿಗಳು ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೆ.ನಿಡುಗಣೆ ಗ್ರಾ.ಪಂ. ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಸುನಿಲ್ ಸುಬ್ರಮಣಿ ಅವರು ಗಿಡ ನೆಟ್ಟರು. ಈ ಸಂದರ್ಭ ಪಂಚಾಯಿತಿ ಅಧ್ಯಕ್ಷ ಅಯ್ಯಪ್ಪ ಮತ್ತಿತರರು ಹಾಜರಿದ್ದರು