ಮಡಿಕೇರಿ, ಜೂ. ೭: ಮುಂಗಾರು ಸಂದರ್ಭದಲ್ಲಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಬಹುದಾದ ಸೂಕ್ಷö್ಮ ಪ್ರದೇಶಗಳ ಜನರನ್ನು ಸ್ಥಳಾಂತರ ಸಂಬAಧ ನೋಟೀಸ್ ನೀಡಿ ಸುಮ್ಮನಾದರೆ ಸಾಲದು, ಅಂತಹ ಸೂಕ್ಷö್ಮ ಪ್ರದೇಶಗಳ ಜನರಿಗೆ ‘ಮನವರಿಕೆ’ ಮಾಡಿ ಸ್ಥಳಾಂತರ ಮಾಡುವಂತೆ ಸಂಬAಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ಅವರು ನಿರ್ದೇಶನ ನೀಡಿದ್ದಾರೆ. ಮುಂಗಾರು ಆರಂಭ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಾಕೃತಿಕ ವಿಕೋಪ ಸಂಬAಧ ಕೈಗೊಳ್ಳಲಾಗಿರುವ ಸಿದ್ಧತೆ ಸಂಬAಧ ವೀಡಿಯೋ ಸಂವಾದ ಮೂಲಕ ಮಾಹಿತಿ ಪಡೆದು ಸಚಿವರು ಮಾತನಾಡಿದರು. ಭೂಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶದ ಕುಟುಂಬಗಳಿಗೆ ನೋಟೀಸ್ ನೀಡಲಾಗಿದೆ ಎಂದು ಸುಮ್ಮನಿದ್ದರೆ ಸಾಲದು, ಕಳೆದ ಬಾರಿ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಅರ್ಚಕರ ಕುಟುಂಬವು ಭೂ ಕುಸಿತಕ್ಕೆ ತುತ್ತಾಯಿತು. ಕಳೆದ ಬಾರಿಯಂತೆ ಪುನಃ ಘಟನೆ ಸಂಭವಿಸಬಾರದು. ನೋಟೀಸ್ ನೀಡಲಾಗಿದೆ; ಆದರೆ ಸ್ಥಳಾಂತರ ಆಗಿಲ್ಲ ಎಂಬ ಉತ್ತರ ಅಧಿಕಾರಿಗಳಿಂದ ಬರಬಾರದು ಎಂದು ಸಚಿವರು ನಿರ್ದೇಶನ ನೀಡಿದರು.ಸೂಕ್ಷö್ಮ ಪ್ರದೇಶದ ಜನರನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಬೇಕು. ಆ ದಿಸೆಯಲ್ಲಿ ಶಾಲೆ ಮತ್ತು ಸಮುದಾಯ ಭವನ ಕಾಯ್ದಿರಿಸಬೇಕು. ಪರಿಹಾರ ಕೇಂದ್ರಕ್ಕೆ ದಾಖಲಾಗುವವರಿಗೆ ಒಳ್ಳೆಯ ಬೆಡ್ಶೀಟ್, ಚಾಪೆ ನೀಡಬೇಕು. ಉತ್ತಮ ಉಪಹಾರ, ಊಟ, ಜೊತೆಗೆ ಔಷಧಿ ದೊರೆಯಬೇಕು. ಹಾಗೆಯೇ ಶೌಚಾಲಯ, ಬಿಸಿ ನೀರು ಇರಬೇಕು ಎಂದು ಸಚಿವರು ತಿಳಿಸಿದರು.
ಪ್ರಾಕೃತಿಕ ವಿಕೋಪ ಸಂಬAಧ ಜಿಲ್ಲೆಯ ಸ್ಥಿತಿಗತಿ ಬಗ್ಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಪ್ರತಿನಿತ್ಯ ಮಾಹಿತಿ ನೀಡಬೇಕು. ಪ್ರತಿ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ನಾನು (ಆರ್.ಅಶೋಕ್) ಸಹ ಶೀಘ್ರ ಕೊಡಗು ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಲಿದ್ದೇನೆ ಎಂದು ಸಚಿವರು ಹೇಳಿದರು.
ಪ್ರಾಕೃತಿಕ ವಿಕೋಪದಿಂದ ಸಾರಿಗೆ, ವಿದ್ಯುತ್ ಸಂಪರ್ಕ ಕಡಿತಗೊಂಡರೆ ಕೂಡಲೇ ಸರಿಪಡಿಸಲು ಆಧುನಿಕ ವಿಧಾನಗಳನ್ನು ಬಳಸಬೇಕು. ಆ ದಿಸೆಯಲ್ಲಿ ಮಿನಿ ವಾಹನ ಮಾಡಿಕೊಂಡು ಎಲ್ಲೆಲ್ಲಿ ಅಡಚಣೆ ಉಂಟಾಗುತ್ತದೆ, ಅಂತಹ ಕಡೆಗಳಲ್ಲಿ ತಕ್ಷಣವೇ ಸರಿಪಡಿಸುವ ಕಾರ್ಯವಾಗಬೇಕು
(ಮೊದಲ ಪುಟದಿಂದ) ಎಂದು ಆರ್.ಅಶೋಕ್ ಅವರು ನುಡಿದರು.
ಪ್ರತಿಯೊಂದು ಜಿಲ್ಲೆಯೂ ವಿಭಿನ್ನ ಸನ್ನಿವೇಶ ಹೊಂದಿರುತ್ತದೆ. ಅಲ್ಲಿಯ ಪರಿಸ್ಥಿತಿಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅರಿವು ಇರುತ್ತದೆ. ಅಲ್ಲಿನ ಭೌಗೋಳಿಕ ಪರಿಸ್ಥಿತಿಗೆ ಅನುಗುಣವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಪ್ರತಿ ತಾಲ್ಲೂಕಿನಲ್ಲಿ ಪ್ರತ್ಯೇಕ ಸಮಿತಿ ರಚಿಸಿ ಅಲ್ಲಿನ ಪರಿಸ್ಥಿತಿಯ ಬಗ್ಗೆ ಸಮಿತಿ ಪರಿಶೀಲನೆ ಮಾಡಬೇಕು. ಜೊತೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಾಹಿತಿ ನೀಡಿ ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದರು.
ಕೊಡಗು ಜಿಲ್ಲೆಯಲ್ಲಿ ಮಡಿಕೇರಿ ನಗರ ಮತ್ತು ವೀರಾಜಪೇಟೆ ಪಟ್ಟಣ ಸೇರಿದಂತೆ ಸುಮಾರು ೮೫ ಗ್ರಾಮಗಳನ್ನು ಪ್ರವಾಹ ಹಾಗೂ ಭೂಕುಸಿತ ಸೂಕ್ಷö್ಮ ಪ್ರದೇಶವೆಂದು ಜಿಐಎಸ್ ಗುರುತಿಸಿದೆ. ಆ ದಿಸೆಯಲ್ಲಿ ಅಂತಹ ಕಡೆಗಳಲ್ಲಿ ಅಗತ್ಯ ಮುನ್ನೆಚ್ಚರ ವಹಿಸಲಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಸೀಮೆಎಣ್ಣೆಗೆ ಬೇಡಿಕೆ ಹೆಚ್ಚಿದೆ. ಆದ್ದರಿಂದ ಮೂರು ತಿಂಗಳ ಕಾಲ ಹೆಚ್ಚುವರಿಯಾಗಿ ಸೀಮೆಎಣ್ಣೆ ಒದಗಿಸುವಂತೆ ಕಂದಾಯ ಸಚಿವರಲ್ಲಿ ಜಿಲ್ಲಾಧಿಕಾರಿ ಅವರು ಕೋರಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಆರ್.ಅಶೋಕ್ ಅವರು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರ ಜತೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಪ್ರಾಕೃತಿಕ ವಿಕೋಪ ಎದುರಿಸಲು ಹಣದ ಕೊರತೆ ಇಲ್ಲ, ಆ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಸಮಸ್ಯೆಗಳಿದ್ದಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರ ಗಮನಕ್ಕೆ ತರಬೇಕು ಎಂದು ಸಚಿವರು ಹೇಳಿದರು. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರು ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಜೊತೆಗೆ ಕೋವಿಡ್ ೧೯ ನಿಯಂತ್ರಣಕ್ಕೂ ಗಮನಹರಿಸಬೇಕು. ಸಚಿವರ ಸಲಹೆ, ಸೂಚನೆ ಪಾಲಿಸಬೇಕು ಎಂದು ಅವರು ಹೇಳಿದರು.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಹಾವೇರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪ್ರಕೃತಿ ವಿಕೋಪಕ್ಕೆ ಸಂಬAಧಿಸಿದAತೆ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಕಂದಾಯ ಸಚಿವರ ಗಮನಕ್ಕೆ ತಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಶಿರಸ್ತೆದಾರ ಪ್ರಕಾಶ, ಅನನ್ಯ ವಾಸುದೇವ್ ಇತರರು ಇದ್ದರು.