ಕೂಡಿಗೆ, ಜೂ. ೭: ವಾಲ್ನೂರು-ತ್ಯಾಗತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಕುಟುಂಬಕ್ಕೆ ದಿನಸಿ ಪದಾರ್ಥಗಳನ್ನು ವಿತರಣೆ ಮಾಡಲಾಯಿತು. ಶಾಲೆಯಲ್ಲಿ ೧ ರಿಂದ ೮ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ೧೫೮ ವಿದ್ಯಾರ್ಥಿಗಳ ಮನೆಗಳಿಗೆ ಅಕ್ಷರ ದಾಸೋಹದ ಪರಿಕರಗಳಾದ ಅಕ್ಕಿ, ಎಣ್ಣೆ, ಬೇಳೆ, ಉಪ್ಪು ಪದಾರ್ಥಗಳನ್ನು ಪ್ರತಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬ್ಯಾಗ್ಗಳಲ್ಲಿ ಪ್ಯಾಕ್ ಮಾಡಿ ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ. ಕುಮಾರ್, ಸಹ ಶಿಕ್ಷಕ ಚೇತನ್ಕುಮಾರ್ ಹಾಗೂ ಅಡುಗೆ ಸಿಬ್ಬಂದಿ ಎಲ್ಲಾ ವಿದ್ಯಾರ್ಥಿಗಳ ಮನೆಬಾಗಿಲಿಗೆ ತಲುಪಿಸುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಪಿಡಿಓ ಮತ್ತು ಸರ್ವ ಸದಸ್ಯರ ಸಹಕಾರದಿಂದ ಪಂಚಾಯಿತಿ ವಾಹನವನ್ನು ಉಚಿತವಾಗಿ ನೀಡಿದ್ದು ಎಲ್ಲಾ ವಿದ್ಯಾರ್ಥಿಗಳ ಮನೆಗಳಿಗೆ ಆಹಾರ ಧಾನ್ಯಗಳನ್ನು ವಿತರಿಸಲಾಗಿದೆ ಎಂದು ಮುಖ್ಯ ಶಿಕ್ಷಕ ಕುಮಾರ್ ತಿಳಿಸಿದ್ದಾರೆ.