ಸೋಮವಾರಪೇಟೆ, ಜೂ. ೧೬: ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಜೇಸೀಐ ಪುಷ್ಪಗಿರಿ ವತಿಯಿಂದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು. ಶಿಬಿರವನ್ನು ಕೊಡಗು ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ವಿಭಾಗದ ವೈದ್ಯ ಕರುಂಬಯ್ಯ ಉದ್ಘಾಟಿಸಿ, ರಕ್ತದಾನ ದಿನದ ವಿಶೇಷ ಹಾಗೂ ರಕ್ತದಾನದ ಮಹತ್ವವನ್ನು ತಿಳಿಸಿದರು. ಅಧ್ಯಕ್ಷತೆಯನ್ನು ಜೇಸೀ ಸಂಸ್ಥೆಯ ಅಧ್ಯಕ್ಷೆ ಮಾಯಾ ಗಿರೀಶ್ ವಹಿಸಿದ್ದರು. ಅತಿಥಿಗಳಾಗಿ ಆಸ್ಪತ್ರೆಯ ವೈದ್ಯಾಧಿಕಾರಿ ರವೀಂದ್ರನ್, ವೈದ್ಯ ಸತೀಶ್‌ಕುಮಾರ್, ಆಸ್ಪತ್ರೆ ಸಿಬ್ಬಂದಿಗಳು ಭಾಗವಹಿಸಿದ್ದರು. ಈ ಸಂದರ್ಭ ಕೊರೊನಾ ವಾರಿಯರ್ಸ್ಗಳಾಗಿ ಸೇವೆ ಸಲ್ಲಿಸುತ್ತಿರುವ ಡಾ. ರವೀಂದ್ರ, ಸತೀಶ್‌ಕುಮಾರ್ ಅವರುಗಳನ್ನು ಜೇಸಿ ಸಂಸ್ಥೆಯಿAದ ಸನ್ಮಾನಿಸಲಾಯಿತು.