ಮುಳ್ಳೂರು, ಜೂ. ೧೬: ಕೋವಿಡ್ ಸೋಂಕು ಪ್ರಕರಣ ಮತ್ತು ಲಾಕ್‌ಡೌನ್ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಅವರು ಶನಿವಾರಸಂತೆ, ದುಂಡಳ್ಳಿ, ಕೊಡ್ಲಿಪೇಟೆ ಗ್ರಾ.ಪಂ.ಗಳಿಗೆ ಭೇಟಿ ನೀಡಿ ಕೋವಿಡ್ ಸೋಂಕು ಪ್ರಕರಣಗಳ ಬಗ್ಗೆ ಸೇರಿದಂತೆ ವಿವಿಧ ಕುಂದು-ಕೊರತೆಗಳ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳು, ಗ್ರಾ.ಪಂ. ಟಾಸ್ಕ್ಫೋರ್ಸ್ ಸಮಿತಿ ಸದಸ್ಯರು ಮತ್ತು ಕೋವಿಡ್ ವಾರಿಯರ್ಸ್ಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು. ಎಂಎಲ್‌ಸಿ ಶನಿವಾರಸಂತೆ ಗ್ರಾ.ಪಂ.ಗೆ ಭೇಟಿ ನೀಡಿದ ಸಂದರ್ಭ ವೃತ್ತ ನಿರೀಕ್ಷಕ ಪರಶಿವಮೂರ್ತಿ, ತಾಲೂಕು ಕೋವಿಡ್ ನೋಡಲ್ ಅಧಿಕಾರಿ ಬಾಲಕೃಷ್ಣ ರೈ, ಗ್ರಾ.ಪಂ. ಅಧ್ಯಕ್ಷೆ ಸರೋಜ, ಉಪಾಧ್ಯಕ್ಷ ಮಧು, ಗ್ರಾ.ಪಂ. ಪಿಡಿಓ ಮೇದಪ್ಪ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜೇಶ್ವರಿ, ಗ್ರಾ.ಪಂ. ಸಿಬ್ಬಂದಿ ಮುಂತಾದವರು ಹಾಜರಿದ್ದರು.