ಸುಂಟಿಕೊಪ್ಪ, ಜೂ. ೨೨: ಕುಶಾಲನಗರದ ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘ ಮತ್ತು ಆರ್ಯವೈಶ್ಯ ಸಮುದಾಯದ ವತಿಯಿಂದ ಗದ್ದೆಹಳ್ಳದ ವಿಕಾಸ್ ಜನಸೇವಾ ಟ್ರಸ್ಟ್ ಜೀವನದಾರಿ ಅನಾಥ ಆಶ್ರಮದಲ್ಲಿ ನೆಲೆಸಿರುವ ನಿವಾಸಿಗಳಿಗೆ ಭೋಜನ ಮತ್ತು ಸಿಹಿಯನ್ನು ವಿತರಿಸಲಾಯಿತು.

ಸಹಕಾರ ಸಂಘದ ಉಪಾಧ್ಯಕ್ಷ ನಟರಾಜ್ ಮಾತನಾಡಿ ಶಿವಮೊಗ್ಗದ ಆರ್ಯವೈಶ್ಯ ಸಮುದಾಯದ ಗುರುಗಳಾದ ಸಚಿದಾನಂದ ಸರಸ್ವತಿ ಸ್ವಾಮೀಜಿಗಳು ಬೆಂಗಳೂರಿನಲ್ಲಿ ಐದು ರಾಜ್ಯಗಳ ಪೀಠಾಧಿಪತಿಯಾಗಿ ಪೀಠಾರೋಹಣ ಮಾಡಿದ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ಈ ಸಂದರ್ಭ ಸಂಘದ ನಿರ್ದೆಶಕರುಗಳಾದ ವಿನಯ್, ಅಶ್ವಿನ್, ಜೀವನದಾರಿ ಆಶ್ರಮದ ಅಧ್ಯಕ್ಷ ರಮೇಶ್, ಸಿಬ್ಬಂದಿಗಳು ಹಾಜರಿದ್ದರು.