ಸಿದ್ದಾಪುರ, ಜೂ. ೨೨: ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಪ್ರವಾಹ ಪೀಡಿತ ನದಿ ತೀರದ ನಿವಾಸಿಗಳಿಗೆ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನೂರಾರು ಮಂದಿಗೆ ಲಸಿಕೆ ನೀಡುವ ಕಾರ್ಯಕ್ಕೆ ಗ್ರಾ.ಪಂ. ಅಧ್ಯಕ್ಷ ಸಾಬು ವರ್ಗಿಸ್ ಹಾಗೂ ಪಿ.ಡಿ.ಓ. ಅನಿಲ್‌ಕುಮಾರ್ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಸಾಬು ವರ್ಗಿಸ್, ಕೊರೊನಾ ಸೋಂಕು ಹರಡದಂತೆ ಗ್ರಾಮ ಪಂಚಾಯಿತಿಯಿAದ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಪಿ.ಡಿ.ಓ. ಅನಿಲ್‌ಕುಮಾರ್ ಮಾತನಾಡಿ, ನದಿ ತೀರದ ನಿವಾಸಿಗಳಿಗಾಗಿ ಲಸಿಕೆಗಳನ್ನು ನೀಡಲಾಗುತ್ತಿದ್ದು, ಸೋಮವಾರ ದಂದು ಒಂದೇ ದಿನದಲ್ಲಿ ೨೩೦ಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ ಎಂದರು.

ಈ ಸಂದರ್ಭ ಗ್ರಾ.ಪಂ. ಸದಸ್ಯರುಗಳು, ಆರೋಗ್ಯ ಇಲಾಖಾಧಿಕಾರಿಗಳು, ಸಿಬ್ಬಂದಿಗಳು, ಟಾಸ್ಕ್ಫೋರ್ಸ್ ಸಮಿತಿ ಸದಸ್ಯರು ಹಾಜರಿದ್ದರು.