ಮಡಿಕೇರಿ, ಜೂ. ೩೦: ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ.ನಾರಾಯಣಗೌಡ ಅವರು ಜುಲೈ ೧ ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಜುಲೈ ೧ ರಂದು (ಇಂದು) ಬೆಳಗ್ಗೆ ೧೦.೩೦ ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನೆ, ಕೊಡಗು ಜಿಲ್ಲೆಯಲ್ಲಿ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಳಕೆ ಮತ್ತು ಬೆಳೆ ವಿಮೆ ಪರಿಹಾರ ಹಣ ಪಾವತಿಯ ಬಗ್ಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ೧೨ ಗಂಟೆಗೆ ಕ್ರೀಡಾ ವಸತಿ ನಿಲಯ ಮತ್ತು ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಹೆಚ್ ಜಿ ಪ್ರಭಾಕರ್ ಅವರು ತಿಳಿಸಿದ್ದಾರೆ.