ಮಡಿಕೇರಿ, ಜು. ೧: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯು ೨೦೧೬-೧೭ ನೇ ಸಾಲಿನಿಂದ ಜಾರಿಯಲ್ಲಿದ್ದು, ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಕೃತಿ ವಿಕೋಪಗಳು ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ನೆರವು ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಕೇಂದ್ರ ಸರ್ಕಾರವು ೨೦೨೦-೨೧ನೇ ಸಾಲಿನಿಂದ ಕೆಲವೊಂದು ಮಾರ್ಪಾಡುಗಳೊಂದಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಸೂಚಿಸಿದ್ದು, ಅದರಂತೆ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.೨ ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗೆ ಯೋಜನೆಯನ್ನು ಗ್ರಾ.ಪಂ. ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳೆವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ನಂತರದ ನಷ್ಟವನ್ನು ಸಹ ಪರಿಗಣಿಸಲಾಗುವುದು. ಬೆಳೆ ವಿಮಾ ನಷ್ಟ ಪರಿಹಾರವನ್ನು ಸಾಮಾನ್ಯ ಬೆಳೆ ಅಂದಾಜು ಸಮೀಕ್ಷೆಯಡಿ ಇಂದಿನ ೭ ವರ್ಷಗಳ ಇಳುವರಿ ಮಾಹಿತಿಯಲ್ಲಿ ಉತ್ತಮ ೫ ವರ್ಷಗಳ ಇಳುವರಿ ಮಾಹಿತಿ ಪರಿಗಣಿಸಿ ಲೆಕ್ಕಹಾಕಲಾಗುತ್ತದೆ.
ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಸಂಬAಧಿಸಿದAತೆ, ಭಾರತಿ ಆಕ್ಸ ವಿಮಾ ಕಂಪನಿಯನ್ನು ಬೆಳೆ ವಿಮೆ ಕಾರ್ಯಕ್ಕೆ ಆಯ್ಕೆ ಮಾಡಲಾಗಿದೆ. ವಿಮಾ ಅರ್ಜಿಗಳು ರಾಷ್ಟಿçÃಕೃತ ಬ್ಯಾಂಕ್ಗಳಲ್ಲಿ ಲಭ್ಯವಿದ್ದು, ಜುಲೈ ೩೧ ರೊಳಗೆ ಮಳೆಯಾಶ್ರಿತ ಮುಸುಕಿನ ಜೋಳ ಹಾಗೂ ಆಗಸ್ಟ್ ೧೬ ರೊಳಗೆ ಭತ್ತ ಬೆಳೆಗಳಿಗೆ ಈ ಯೋಜನೆಯಡಿ ಅರ್ಜಿಯನ್ನು ರಾಷ್ಟಿçÃಕೃತ ಬ್ಯಾಂಕ್ಗಳಲ್ಲಿ ಸಲ್ಲಿಸಿ ನೊಂದಾಯಿಸಬಹುದಾಗಿದೆ.
ಸಾಮಾನ್ಯ ವಿಮೆಗೆ ಪ್ರತಿ ಹೆಕ್ಟೇರ್ ಭತ್ತ (ನೀರಾವರಿ) ಬೆಳೆಗೆ ರೂ. ೮೬ ಸಾವಿರ, ಭತ್ತ (ಮಳೆಯಾಶ್ರಿತ) ಬೆಳೆಗೆ ರೂ. ೫೫ ಸಾವಿರ ಹಾಗೂ ಮಳೆಯಾಶ್ರಿತ ಮುಸುಕಿನ ಜೋಳ ಬೆಳೆಗೆ ರೂ. ೫೦ ಸಾವಿರ ವಿಮಾ ಮೊತ್ತವಾಗಿದೆ. ಹೆಚ್ಚಿನ ಮಾಹಿತಿಗೆ ಭಾರಿ ಆಕ್ಸ ವಿಮಾ ಕಂಪನಿಯ ಪ್ರತಿನಿಧಿಗಳಾದ ಬೊಳ್ಳಜಿರ ಅಯ್ಯಪ್ಪ ವೀರಾಜಪೇಟೆ ದೂ.ಸಂಖ್ಯೆ ೯೮೮೦೭೭೮೦೪೭, ಮಂಜುನಾಥ ಸೋಮವಾರಪೇಟೆ ದೂ.ಸಂಖ್ಯೆ ೯೪೪೮೭೬೫೨೭೯, ಶಂಕರ್ ಮಡಿಕೇರಿ ದೂ.ಸಂಖ್ಯೆ ೯೫೯೦೯೨೮೮೮೬ ಸಂಪರ್ಕಿಸಬಹುದು ಅಥವಾ ಹೋಬಳಿಯ ರೈತ ಸಂಪರ್ಕ ಕೇಂದ್ರ, ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು. ಈ ಯೋಜನೆಯನ್ನು ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ರೈತರು ಸದುಪಯೋಗ ಪಡಿಸಿಕೊಳ್ಳುವಂತೆ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರಾದ ಶಬನಾ ಎಂ. ಷೇಕ್ ಕೋರಿದ್ದಾರೆ.