ಮಡಿಕೇರಿ, ಜು.೧೩: ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ವ್ಯಾಪಕ ಮಳೆಯಾಗುತ್ತಿದೆ. ಇದರಿಂದ ಕಾವೇರಿ ನದಿ ಪಾತ್ರದಲ್ಲಿ ನೀರಿನ ಹರಿವು ಹೆಚ್ಚಳವಾಗಿರುವ ಹಿನ್ನೆಲೆ ಶಾಸಕ ಎಂ.ಪಿ.ಅಪ್ಪಚ್ಚುರAಜನ್ ಅವರು ಬಲಮುರಿಯ ಕೆಳ ಸೇತುವೆಗೆ ಭೇಟಿ ನೀಡಿ ವೀಕ್ಷಿಸಿದರು.
ಬಳಿಕ ಮಾತನಾಡಿದ ಶಾಸಕರು ಕಳೆದ ಎರಡು ಮೂರು ದಿನಗಳಿಂದ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ನದಿ, ತೊರೆ, ಹಳ್ಳಕೊಳ್ಳ, ಜಲಪಾತಗಳು ತುಂಬಿ ಹರಿಯುತ್ತಿವೆ. ಬಲಮುರಿ ಕೆಳಸೇತುವೆಯಲ್ಲಿ ನೀರು ಹೆಚ್ಚಾಗುತ್ತಿದ್ದು, ಇಲ್ಲಿನ ಸ್ಥಳೀಯರು ಎಚ್ಚರವಹಿಸಬೇಕು ಎಂದು ಸಲಹೆ ನೀಡಿದರು.
ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ತಯಾರಿ ಮಾಡಿಕೊಂಡಿದೆ. ಆ ದಿಸೆಯಲ್ಲಿ ಹೋಬಳಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮಳೆ ಹೆಚ್ಚಾದ ಸಂದರ್ಭದಲ್ಲಿ ಸಾರ್ವಜನಿಕರು ಮುನ್ನೆಚ್ಚರ ವಹಿಸಬೇಕು. ಜೊತೆಗೆ ಕಾಳಜಿ ಕೇಂದ್ರಕ್ಕೆ ಸ್ಥಳಾಂತರವಾಗಬೇಕು ಎಂದು ಶಾಸಕರು ಕೋರಿದರು. ಕಾಳಜಿ ಕೇಂದ್ರಕ್ಕೆ ತೆರಳುವ ಸಂದರ್ಭದಲ್ಲಿ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ. ಯಾವುದೇ ರೀತಿ ಸಮಸ್ಯೆ ಉಂಟಾಗದAತೆ ಗಮನಹರಿಸಬೇಕು ಎಂದರು.