ವೀರಾಜಪೇಟೆ, ಜು. ೧೯: ವೀರಾಜಪೇಟೆ ಪಟ್ಟಣ ಪಂಚಾಯಿತಿಯ ಮೂಲಕ ನೀರಿನ ಸ್ಥಾವರ ಬೇತ್ರಿಯಲ್ಲಿದ್ದು, ಬೇತ್ರಿಯಿಂದ ವೀರಾಜಪೇಟೆ ಪಟ್ಟಣಕ್ಕೆ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಆದರೆ, ಪಟ್ಟಣದಲ್ಲಿ ಮಳೆಯು ಹೆಚ್ಚಾಗಿರುವುದರಿಂದ ವಿದ್ಯುತ್ ಕಂಬಗಳು ಹಾಗೂ ವಯರ್‌ಗಳು ಪದೇ ಪದೇ ತುಂಡಾಗುತ್ತಿರುವುದ ರಿಂದ ಅನಿಯಮಿತ ವಿದ್ಯುತ್ ಕಡಿತದಿಂದಾಗಿ ಪಟ್ಟಣಕ್ಕೆ ನೀರನ್ನು ಸರಬರಾಜು ಮಾಡಲು ತೊಂದರೆ ಯಾಗುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ಪಟ್ಟಣ ಪಂಚಾಯಿತಿ ಪ್ರಕಟಣೆಯಲ್ಲಿ ಮನವಿ ಮಾಡಿದೆ.