ಕೂಡಿಗೆ, ಜು. ೨೧: ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ರಾಷ್ಟಿçÃಯ ಹಸಿರು ಪಡೆ, ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಇಕೋ ಕ್ಲಬ್ ಸಂಯುಕ್ತಾಶ್ರಯದಲ್ಲಿ ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವನ ಸಂವರ್ಧನಾ ಅಭಿಯಾನದಡಿ ‘ನಮ್ಮ ನಡೆ ಹಸಿರೆಡೆಗೆ’ ಎಂಬ ಧ್ಯೇಯ ವಾಕ್ಯದಡಿ ವನ ಮಹೋತ್ಸವದ ಅಂಗವಾಗಿ ಸಸಿಗಳನ್ನು ನೆಡಲಾಯಿತು.

ಡಯಟ್ ಸಂಸ್ಥೆ ಆವರಣದಲ್ಲಿ ಸಸಿ ನೆಡುವ ಮೂಲಕ ವನ ಸಂವರ್ಧನಾ ಅಭಿಯಾನಕ್ಕೆ ಚಾಲನೆ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕರ್ನಾಟಕ ಪಠ್ಯಪುಸ್ತಕ ಸಂಘದ ನಿರ್ದೇಶಕ ಮಾದೇಗೌಡ ಮಾತನಾಡಿ, ಶಾಲೆಗಳಲ್ಲಿ ಇಕೋ ಕ್ಲಬ್‌ಗಳ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಮೂಲಕ ಅವರನ್ನು ಭವಿಷ್ಯದ ಪರಿಸರ ರಾಯಭಾರಿಗಳಾಗಿ ರೂಪಿಸಲು ಶಿಕ್ಷಕರು ಕಾರ್ಯೋನ್ಮುಖರಾಗಬೇಕು ಎಂದರು.

ಡಯಟ್ ಸಂಸ್ಥೆಯ ಪ್ರಾಂಶುಪಾಲರೂ ಆದ ಡಿಡಿಪಿಐ ಎ.ಶ್ರೀಧರನ್ ಮಾತನಾಡಿ, ಜಿಲ್ಲೆಯಲ್ಲಿ ರಾಷ್ಟಿçÃಯ ಹಸಿರು ಪಡೆ ಮತ್ತು ಇಕೋ ಕ್ಲಬ್‌ಗಳ ಮೂಲಕ ಶಾಲೆಗಳಲ್ಲಿ ಹಸಿರು ಪರಿಸರ ನಿರ್ಮಿಸಲು ಕೈಗೊಂಡಿರುವ ವನ ಸಂವರ್ಧನೆ ಅಭಿಯಾನದ ಮೂಲಕ ಶಾಲಾವರಣದಲ್ಲಿ ಅರಣ್ಯ ಸಸಿನೆಟ್ಟು ಬೆಳೆಸಬೇಕು ಎಂದರು.

ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿ ಪರಿಸರ ಸಂರಕ್ಷಣೆ ಕುರಿತು ಮಾತನಾಡಿದ ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿಯೂ ಆದ ಕೂಡುಮಂಗಳೂರು ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗಾಗಿ ಕಂಕಣ ಬದ್ಧರಾಗಿ ಶ್ರಮಿಸುವ ಮೂಲಕ ಶಾಲಾ ಪರಿಸರವನ್ನು ಉತ್ತಮಪಡಿಸಲು ಸಾಧ್ಯ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್.ಕೆ.ಪಾಂಡು, ಶ್ರೀಶೈಲ ಬೀಳಗಿ, ಗುರುರಾಜ್, ಡಿಡಿಪಿಐ ಕಚೆೆÃರಿಯ ಶಿಕ್ಷಣಾಧಿಕಾರಿ ಕೆ.ಕಾಂತರಾಜು, ಡಿವೈಪಿಸಿ ಎಂ.ಕೃಷ್ಣಪ್ಪ, ಡಯಟ್ ಉಪನ್ಯಾಸಕರಾದ ಕೃಷ್ಣಪ್ಪ, ವಿ.ವಿಜಯ್, ಯು.ಸಿದ್ದೇಶಿ, ಕೆ.ಜಿ. ನೀಲಕಂಠಪ್ಪ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಎಸ್. ಪಲ್ಲೇದ್, ಶಿಕ್ಷಣ ಸಂಯೋಜಕರಾದ ಎಂ.ಎಚ್. ಹರೀಶ್, ಪಿ.ಎಂ. ಅಯ್ಯಪ್ಪ, ಎಸ್.ಆರ್. ಶಿವಲಿಂಗ, ಇತರರು ಇದ್ದರು.