ಮಡಿಕೇರಿ, ಜು. ೨೨: ಬಾಲಮಂದಿರಗಳಲ್ಲಿ ಪೋಷಣೆ ಹಾಗೂ ರಕ್ಷಣೆ ಪಡೆಯುತ್ತಿರುವ ಮಕ್ಕಳಿಗೆ ಶಾಲೆಗೆ ತೆರಳಲು ಹಾಗೂ ಇತರ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಬೆಂಗಳೂರಿನ ಕೇಂದ್ರ ಯಾಂತ್ರಿಕ ಸಂಸ್ಥೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಒಂದು ಮಿನಿ ಬಸ್‌ನ್ನು ಮಕ್ಕಳ ಉಪಯೋಗಕ್ಕಾಗಿ ಹಂಚಿಕೆ ಮಾಡಿದೆ. ಈ ವಾಹನವನ್ನು ತಾ. ೨೩ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾಧಿಕಾರಿ ಅವರ ಉಪಸ್ಥಿತಿಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸುವ ಕಾರ್ಯಕ್ರಮವು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.