ನಾಪೋಕ್ಲು, ಜು. ೨೮: ನಾಪೋಕ್ಲು ಲಯನ್ಸ್ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯೋತ್ಸವವನ್ನು ಸ್ಥಳೀಯ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿತ್ತು. ಮೊದಲಿಗೆ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ನಮನ ಸಲ್ಲಿಸಿ ನಂತರ ನಿವೃತ್ತ ಕಾರ್ಗಿಲ್ ಯೋಧ ಕೈಕಾಡು ಗ್ರಾಮದ ಕುಮ್ಮಂಡ ವಿಠಲ್ ಅಯ್ಯಪ್ಪ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಮುಕ್ಕಾಟೀರ ವಿನಯ್ ವಹಿಸಿದ್ದರು. ಈ ಸಂದರ್ಭ ಲಯನ್ಸ್ ವಲಯಾಧ್ಯಕ್ಷ ಕೋಟೆರ ಡಾ. ಪಂಚಮ್ ತಿಮ್ಮಯ್ಯ, ಕಾರ್ಯದರ್ಶಿ ಕೇಟೋಳಿರ ರತ್ನ ಚರ್ಮಣ್ಣ, ಖಜಾಂಚಿ ಕೇಟೋಳಿರ ಕುಟ್ಟಪ್ಪ, ಪದಾಧಿಕಾರಿಗಳಾದ ಅಪ್ಪಾರಂಡ ಸುಭಾಶ್ ತಿಮ್ಮಯ್ಯ, ಬೊಪ್ಪಂಡ ಡಾ. ಜಾಲಿ ಬೋಪಯ್ಯ ಮತ್ತಿತರರು ಇದ್ದರು.