ಮುಳ್ಳೂರು, ಜು. ೨೮: ಶನಿವಾರಸಂತೆ ರೋಟರಿ ಕ್ಲಬ್ ವತಿಯಿಂದ ತಾ. ೨೨ ರಂದು ಶನಿವಾರಸಂತೆಯಲ್ಲಿ ಹತ್ತನೆ ತರಗತಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಬಿಸ್ಕತ್ ವಿತರಿಸಲಾಯಿತು.

ಪರೀಕ್ಷೆ ಬರೆದು ಮುಗಿದ ನಂತರ ವಿದ್ಯಾರ್ಥಿಗಳಿಗೆ ಬಿಸ್ಕತ್ ವಿತರಿಸಿದರು. ರೋಟರಿ ಕ್ಲಬ್ ವತಿಯಿಂದ ೫೦೦ ಕಿಂತ ಹೆಚ್ಚಿನ ವಿದ್ಯಾರ್ಥಿಗಳಿಗೆ ಬಿಸ್ಕತ್ ವಿತರಿಸಲಾಯಿತು. ಈ ಸಂದರ್ಭ ರೋಟರಿ ಕ್ಲಬ್ ಅಧ್ಯಕ್ಷ ಹೆಚ್.ಪಿ. ಮೋಹನ್, ಕಾರ್ಯದರ್ಶಿ ವಸಂತ್ ಹಾಗೂ ರೋಟರಿ ಕ್ಲಬ್ ಸದಸ್ಯರು ಹಾಜರಿದ್ದರು.