ಮಡಿಕೇರಿ, ಜು. ೩೧: ಕರ್ನಾಟಕ ರಾಜ್ಯ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ (ಕ್ಯಾಮ್ಸ್) ಕಾರ್ಯದರ್ಶಿ ಡಿ.ಶಶಿಕುಮಾರ್ ಅವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತçಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವುದನ್ನು ಖಂಡಿಸಿ ಕೊಡಗು ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ವತಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

ಖಾಸಗಿ ವಿದ್ಯಾಸಂಸ್ಥೆಗಳ ಧ್ವನಿಯಾಗಿರುವ ಶಶಿಕುಮಾರ್ ಅವರ ಮೇಲಿನ ಹಲ್ಲೆ ಖಂಡಿಸಿ ನಡೆಯುತ್ತಿದ್ದ ಆನ್‌ಲೈನ್ ತರಗತಿಯನ್ನು ಸ್ಥಗಿತಗೊಳಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಲಾಯಿತು. ಮನವಿ ಸಲ್ಲಿಕೆ ಸಂದರ್ಭ ಸಂಘಟನೆಯ ಅಧ್ಯಕ್ಷ ಝರು ಗಣಪತಿ, ಉಪಾಧ್ಯಕ್ಷ ಎಂ.ಟಿ. ದಾಮೋದರ್, ಪ್ರಧಾನ ಕಾರ್ಯದರ್ಶಿ ಕೋಟ್ರಂಗಡ ತಿಮ್ಮಯ್ಯ ಹಾಜರಿದ್ದರು.