ಶನಿವಾರಸಂತೆ, ಆ. ೨: ಕೊಡ್ಲಿಪೇಟೆ ಹೋಬಳಿ ಕ್ಯಾತೆ ಗ್ರಾಮದ ನಿವಾಸಿ ಕೂಲಿ ಕಾರ್ಮಿಕ ಚಂದನ್ (೨೨) ಇಂದು ಬೆಳಿಗ್ಗೆ ತನ್ನ ಮನೆಯ ಮಧ್ಯಕೋಣೆಯ ಮರದ ಬಿಟ್ಟಕ್ಕೆ ನೈಲಾನ್ ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಂದೆ ಕೃಷ್ಣಪ್ಪ ಶನಿವಾರಸಂತೆ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆ ಇನ್ಸ್ಪೆಕ್ಟರ್ ಎಸ್. ಪರಶಿವಮೂರ್ತಿ, ಠಾಣಾಧಿಕಾರಿ ಹೆಚ್.ಇ. ದೇವರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸಹಾಯಕ ಠಾಣಾಧಿಕಾರಿ ಕೃಷ್ಣೇಗೌಡ ಅವರು ಸಿ.ಆರ್.ಪಿ.ಸಿ. ಕಲಂ ೧೭೪ ರಡಿ ಪ್ರಕರಣ ದಾಖಲಿಸಿದ್ದಾರೆ.