ಮಡಿಕೇರಿ, ಆ. ೨: ನಗರದ ಕಾವೇರಿ ಕಲಾಕ್ಷೇತ್ರ ಮತ್ತು ಓಂಕಾರ ಸದನದÀಲ್ಲಿ ಕೋವಿಡ್ ಲಸಿಕಾ ಶಿಬಿರ ನಡೆಯುತ್ತಿದ್ದು, ಇದರ ವ್ಯವಸ್ಥೆಯನ್ನು ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಸಿಕೆ ಪಡೆಯಲು ಬರುವ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಕಾರ್ಯ ನಿರ್ವಹಿಸಬೇಕೆಂದು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಸೂಚಿಸಿದರು. ಈ ಸಂದರ್ಭ ಬಿಜೆಪಿ ನಗರಾಧ್ಯಕ್ಷ ಮನು ಮಂಜುನಾಥ್, ಸಂಘ ಪರಿವಾರದ ಚೇತನ್ ಹಾಗೂ ನಗರಸಭೆ ಸದಸ್ಯೆ ಸಬಿತಾ ಹಾಜರಿದ್ದರು.