ಮಡಿಕೇರಿ ಆ.೧೬ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯಕ್ಕೆ ಅರೆಭಾಷೆ ಸಾಹಿತ್ಯಕ್ಕೆ ಸಂಬAಧಿಸಿದ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು.

ಅಕಾಡೆಮಿ ಅಧ್ಯಕ್ಷ ಲಕ್ಷಿö್ಮÃನಾರಾಯಣ ಕಜಗದ್ದೆ, ಸದಸ್ಯರುಗಳಾದ ಎ.ಟಿ.ಕುಸುಮಾಧರ, ಪುರುಷೋತ್ತಮ ಕಿರ್ಲಾಯ, ಶಿಕ್ಷಕ ಕುಮಾರಸ್ವಾಮಿ ಅವರುಗಳು ಗ್ರಾ.ಪಂ ಅಧ್ಯಕ್ಷೆ ಬಿ.ಸಿ.ಸುಜಾತ ಚಂದ್ರಶೇಖರ್, ಕಾರ್ಯದರ್ಶಿ ಕೆ.ಅನಿತಾ, ಅಭಿವೃದ್ಧಿ ಅಧಿಕಾರಿ ಕೆ.ಎಂ.ಚAದ್ರಮೌಳಿ ಹಾಗೂ ಗ್ರಂಥಪಾಲಕಿ ಟಿ.ಬಿ.ಕೋಮಲ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸಿದರು.