ಕುಶಾಲನಗರ, ಆ. ೧೭: ಕುಶಾಲನಗರದಲ್ಲಿ ಮಂಗಳವಾರ ನಡೆಯುವ ವಾರದ ಸಂತೆಯಲ್ಲಿ ವ್ಯಾಪಾರಿಗಳು ಮಾಸ್ಕ್ ಧರಿಸದೆ ವ್ಯಾಪಾರ ವಹಿವಾಟು ನಡೆಸುತ್ತಿದ್ದುದನ್ನು ಕಂಡು ಸಾರ್ವಜನಿಕರು ಪಟ್ಟಣ ಪಂಚಾಯ್ತಿಗೆ ದೂರು ನೀಡಿದ ಹಿನ್ನೆಲೆ ತಕ್ಷಣವೇ ಎಚ್ಚೆತ್ತುಕೊಂಡ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ನಡೆಯುತ್ತಿದ್ದ ಸಂತೆಗೆ ದಾಳಿ ನಡೆಸಿ ಹಲವು ಸಂತೆ ವ್ಯಾಪಾರಿಗಳಿಗೆ ಸ್ಥಳದಲ್ಲೇ ದಂಡ ವಿಧಿಸಿದ ಘಟನೆ ನಡೆಯಿತು.

ಬಹುತೇಕ ಸಂತೆ ವ್ಯಾಪಾರಿಗಳು ಮಾಸ್ಕ್ ಅನ್ನು ತಮ್ಮ ಜೇಬಿನಲ್ಲಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ದಾಳಿ ವೇಳೆ ಮುಖಕ್ಕೆ ಸರಿಯಾಗಿ ಮಾಸ್ಕ್ ಧರಿಸದಿರುವುದು ಒಂದೆಡೆ ಕಂಡು ಬಂದರೆ, ಕೆಲವರು ದಂಡ ಕಟ್ಟಲು ನಿರಾಕರಿಸಿದ್ದು ಗೋಚರಿಸಿತು.

- ಸಿಂಚು