ಸಿದ್ದಾಪುರ, ಆ. ೨೨: ಸಿದ್ದಾಪುರದಲ್ಲಿ ೧೬೭ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯು ತಾ. ೨೩ರಂದು (ಇಂದು) ನಡೆಯಲಿದೆ. ಶ್ರೀ ನಾರಾಯಣ ಧರ್ಮ ಪರಿಪಾಲನಾ (ಎಸ್.ಎನ್.ಡಿ.ಪಿ.) ಯೋಗಂ ಕೊಡಗು ಜಿಲ್ಲಾ ಯೂನಿಯನ್ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ನಾರಾಯಣ ಗುರು ಸಭಾಂಗಣದಲ್ಲಿ ನಡೆಯಲಿದೆ ಎಂದು ಎಸ್.ಎನ್.ಡಿ.ಪಿ. ಜಿಲ್ಲಾ ಯೂನಿಯನ್ ಅಧ್ಯಕ್ಷ ವಿ.ಕೆ. ಲೋಕೇಶ್ ತಿಳಿಸಿದ್ದಾರೆ. ಬೆಳಿಗ್ಗೆ ೧೦.೩೦ಕ್ಕೆ ಗುರುಪೂಜೆ ನಡೆಯಲಿದ್ದು, ನಂತರ ತಾ.ಪಂ. ಮಾಜಿ ಸದಸ್ಯ ಟಿ.ಕೆ. ಶ್ರೀಧರನ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಸಭಾ ಕಾರ್ಯಕ್ರಮ ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದ್ದು, ಕಾರ್ಯಕ್ರಮವನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಯೂನಿಯನ್ ಅಧ್ಯಕ್ಷ ವಿ.ಕೆ. ಲೋಕೇಶ್ ವಹಿಸಲಿದ್ದಾರೆ.