ಸುಂಟಿಕೊಪ್ಪ, ಆ. ೨೬: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶೃದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ದಡಿಯಲ್ಲಿ ಕೊಡಗರಹಳ್ಳಿ ಒಕ್ಕೂಟ, ಮಹಿಳಾ ಸ್ವ ಸಹಾಯ ಸಂಘಗಳು ಹಾಗೂ ಪ್ರಗತಿ ಬಂಧು ಸ್ವ ಸಹಾಯ ಸಂಘದ ಸದಸ್ಯರು ಸ್ಕೂಲ್ ಬಾಣೆಯ ಶ್ರೀ ಚಾಮುಂಡೇಶ್ವರಿ ದೇವಾಲಯದ ಆವರಣದÀಲ್ಲಿ ಬೆಳೆದಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು.

ಈ ಸಂದರ್ಭ ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುನಿಲ್, ದೇವಸ್ಥಾನ ಅರ್ಚಕ ನಾರಾಯಣ ಪೂಜಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಪುಷ್ಪಾವತಿ, ಒಕ್ಕೂಟದ ಅಧ್ಯಕ್ಷೆÀ ಸುಮಿತ್ರ, ಉಪಾಧ್ಯಕ್ಷÀ ಜೀವನ್ ಕುಮಾರ್, ಸೇವಾ ಪ್ರತಿನಿಧಿ ಹೇಮಾವತಿ, ಒಕ್ಕೂಟ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.