ಸೋಮವಾರಪೇಟೆ, ಆ. ೨೬: ಪಟ್ಟಣದ ಬಿಜೆಪಿ ಯುವ ಮೋರ್ಚಾ ಎಸ್‌ಸಿ ಘಟಕದ ಅಧ್ಯಕ್ಷ ಸಂದೀಪ್ ಸೇರಿದಂತೆ ಇತರರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಗೌಡ ಸಮ್ಮುಖದಲ್ಲಿ ಸಂದೀಪ್, ಭರತ್, ಧನುಷ್, ಕುಮಾರ್, ಸತ್ಯ, ಅಭಿಜಿತ್, ಮುತ್ತಾಲಿ, ಅಜಯ್ ಸೇರಿದಂತೆ ಇತರರು ಕಾಂಗ್ರೆಸ್ ಸೇರ್ಪಡೆ ಗೊಂಡರು. ಈ ಸಂದರ್ಭ ನಗರ ಕಾಂಗ್ರೆಸ್ ಅಧ್ಯಕ್ಷ ನಾಗರಾಜು, ಬ್ಲಾಕ್ ಅಧ್ಯಕ್ಷ ಬಿ.ಬಿ. ಸತೀಶ್, ಪ್ರಮುಖರಾದ ಚಂಗಪ್ಪ, ಮಂಜುನಾಥ್, ಬಸವರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.