ಮಡಿಕೇರಿ, ಆ. ೨೬: ಮೂರ್ನಾಡು ಪದವಿಪೂರ್ವ ಕಾಲೇಜಿನ ಎನ್.ಸಿ.ಸಿ ಘಟಕದ ವತಿಯಿಂದ ಎನ್.ಸಿ.ಸಿ. ಅಧಿಕಾರಿಗಳಾದ ಕಾವೇರಪ್ಪ ಇವರ ನೇತೃತ್ವದಲ್ಲಿ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಆವರಣ ಹಾಗೂ ಮೂರ್ನಾಡಿನ ಮುಖ್ಯ ಬೀದಿಗಳಲ್ಲಿ ಸ್ವಚ್ಛತಾ ಕಾರ್ಯ ಮಾಡಿ ಪ್ಲಾಸ್ಟಿಕ್ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಬಿ.ಜಿ. ಮಾದಪ್ಪ, ಕಾರ್ಯದರ್ಶಿ ಪಿ.ಯಂ. ವೇಣು ಅಪ್ಪಣ್ಣ, ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ ಹಾಜರಿದ್ದರು.