ಶನಿವಾರಸಂತೆ, ಆ. ೨೬: ಇಲ್ಲಿನ ರೋಟರಿ ಸಂಸ್ಥೆ ವತಿಯಿಂದ ಇಂದು ಬೆಳಿಗ್ಗೆ ಶನಿವಾರಸಂತೆ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಎಲ್ಲಾ ಆರೋಗ್ಯ ಸಿಬ್ಬಂದಿಗಳಿಗೆ ಹಾಗೂ ಪತ್ರಕರ್ತರಿಗೆ ಓ-೯೫ ಮಾಸ್ಕ್ಗಳನ್ನು ವಿತರಿಸಲಾಯಿತು.

ರೋಟರಿ ಅಧ್ಯಕ್ಷ ಹೆಚ್.ಪಿ. ಮೋಹನ್ ಹಾಗೂ ವೈದ್ಯಾಧಿಕಾರಿ ಡಾ. ಚಂದನ್ ಅವರುಗಳು ಮಾತನಾಡಿ, ಕೊರೊನಾ ಇನ್ನೂ ಮುಗಿದಿಲ್ಲ. ಕೊರೊನಾ ಎಲ್ಲಾ ಕಡೆ ಆವರಿಸುತ್ತಿದೆ. ಆದ್ದರಿಂದ ಮಾಸ್ಕ್, ಸ್ಯಾನಿಟೈಸರ್ ಉಪಯೋಗಿಸಿ, ಅಂತರವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ಈ ಸಂದರ್ಭ ರೋಟರಿ ಅಧ್ಯಕ್ಷ ಹೆಚ್.ಪಿ. ಮೋಹನ, ವೈದ್ಯಾಧಿಕಾರಿ ಗಳಾದ ಡಾ. ಚಂದನ್, ಡಾ. ಯಶವಂತ್, ರೋಟರಿ ಕಾರ್ಯದರ್ಶಿ ಎಂ.ಎಸ್. ವಸಂತ್, ಶಿವಾನಂದ ಮತ್ತಿತರರಿದ್ದರು.