ವೀರಾಜಪೇಟೆ, ಆ. ೨೬: ವೀರಾಜಪೇಟೆ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆ ವಲಯದ ಹಾಲುಗುಂದ ಕಾರ್ಯಕ್ಷೇತ್ರದ ನವೋದಯ ಜ್ಞಾನವಿಕಾಸ ಕೇಂದ್ರದ ವತಿಯಿಂದ ಬೈರಂಬಾಡದ ಸಮುದಾಯ ಭವನದಲ್ಲಿ ಮಹಿಳಾ ವಿಚಾರಗೋಷ್ಠಿ ಹಾಗೂ ವರಮಹಾಲಕ್ಷಿö್ಮ ಪೂಜಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ವೀರಾಜಪೇಟೆ ತಾಲೂಕಿನ ಯೋಜನಾಧಿಕಾರಿ ಪದ್ಮಯ್ಯ, ಬೈರಂಬಾಡ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯರಾದ ಪದ್ಮ, ಹಾಲುಗುಂದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೀತಮ್ಮ ವೀರಾಜಪೇಟೆ ವಲಯದ ಮೇಲ್ವಿಚಾರಕಿ ರತ್ನ ಮೈಪಾಲ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಆರ್. ಶ್ರೇಯಾ, ಸೇವಾ ಪ್ರತಿನಿಧಿಗಳಾದ ಮೀನಾಕ್ಷಿ ಮತ್ತು ದೇಚಕ್ಕಿ ಸೇರಿದಂತೆ ಕೇಂದ್ರದ ಎಲ್ಲಾ ಸದಸ್ಯರು ಹಾಜರಿದ್ದರು.