ಮಡಿಕೇರಿ, ಆ. ೨೭: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಕೊಡಗು ಜಿಲ್ಲೆಯಾದ್ಯಂತ ಆರಂಭವಾಗಿದೆ.

ಸರ್ಕಾರದ ಆದೇಶದ ಅನುಸಾರ ಈ ಬಾರಿಯ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು “ಈಚಿಡಿmeಡಿ ಅಡಿoಠಿ Suಡಿveಥಿ ಂಠಿಠಿ-೨೦೨೧-೨೨” ಎಂಬ ಹೆಸರಿನ ಮೊಬೈಲ್ ಆ್ಯಪ್‌ಅನ್ನು ಗೂಗಲ್ ಪ್ಲೇ-ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಮೊಬೈಲ್ ಆ್ಯಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಬನಾ ಎಂ. ಷೇಕ್ ತಿಳಿಸಿದ್ದಾರೆ.

ರೈತರು ಬೆಳೆ ಸಮೀಕ್ಷೆ ಮೊಬೈಲ್ ಆಪ್ ಅನ್ನು ಬಳಸಲು ಗೂಗಲ್ ಪ್ಲೆಸ್ಟೋರ್‌ನಲ್ಲಿ ಈಚಿಡಿmeಡಿ ಅಡಿoಠಿ Suಡಿveಥಿ ಂಠಿಠಿ-೨೦೨೦-೨೧ನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಆರ್ಥಿಕ ವರ್ಷ ಹಾಗೂ ಋತು ದಾಖಲಿಸಬೇಕು. ರೈತರ ಹೆಸರು, ಮೊಬೈಲ್ ಸಂಖ್ಯೆ ಒಟಿಪಿ ನಮೂದಿಸಿ ರೈತರು ತಮ್ಮ ವಿವರಗಳನ್ನು ನೋಂದಣಿ ಮಾಡಿಕೊಳ್ಳಬೇಕು.

ರೈತರ ಆಧಾರ್ ಕಾರ್ಡ್ನ್ನು ಸ್ಕಾö್ಯನ್ ಮಾಡುವುದು, ಸ್ಕಾö್ಯನ್ ಆಗದೇ ಇದ್ದಲ್ಲಿ ನಿಗದಿತ ನಮೂನೆಯಂತೆ ವಿವರಗಳನ್ನು ದಾಖಲಿಸುವುದು. ಮೊಬೈಲ್ ಆಪ್‌ನಲ್ಲಿ ಮೊದಲು ಮಾಸ್ಟರ್ ವಿವರ, ಪಹಣಿ ವಿವರ ಮತ್ತು ಮಾಲೀಕರ ವಿವರ, ಪಾಲಿಗಾನ್ ಹಾಗೂ ಜಿಐಎಸ್. ಮ್ಯಾಪ್ ಡೌನ್‌ಲೋಡ್ ಮಾಡಿಕೊಳ್ಳುವುದು. ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ ತಮ್ಮ ಜಮೀನಿನ ಸರ್ವೆ ನಂಬರ್‌ಗಳನ್ನು ಆಪ್‌ಗೆ ಸೇರಿಸಿಕೊಳ್ಳಬೇಕು ಹಾಗೂ ಹಿಸ್ಸಾ ಇದ್ದರೆ ಆಯ್ಕೆ ಮಾಡಬೇಕು. ಆಧಾರ್‌ನಲ್ಲಿರುವ ಹೆಸರು ಮತ್ತು ಪಹಣಿಯಲ್ಲಿರುವ ಹೆಸರು ಹೊಂದಾಣಿಕೆಯಾಗದಿದ್ದಲ್ಲಿ ಕೆಳಗೆ ಕೊಟ್ಟಿರುವ ೩ ಆಯ್ಕೆಗಳಲ್ಲಿ ತಮಗೆ ಅನ್ವಯಿಸುವ ಒಂದನ್ನು ಆರಿಸುವುದು. ಬೆಳೆ ಸರ್ವೆ ಪ್ರಾರಂಭಿಸಿ ಕ್ಲಿಕ್ ಮಾಡುವುದು. ಮಾಲೀಕರ ಹೆಸರು ಆಯ್ಕೆ ಮಾಡಿ, ಕ್ಷೇತ್ರ ನಮೂದಿಸುವುದು.

ಮಾಲೀಕರ ಪರವಾಗಿ ಇನ್ನೊಬ್ಬರ ಬೆಳೆ ದಾಖಲೆ ಮಾಡುತ್ತಿದ್ದರೆ ರೈತರ ಪರವಾಗಿ ಬೆಳೆ ಮಾಹಿತಿಯನ್ನು ದಾಖಲಿಸುತ್ತಿದ್ದೆನೆಂದು ಆಯ್ಕೆ ಮಾಡುವುದು. ರೈತರ ಪರವಾಗಿ ದಾಖಲಿಸುತ್ತಿದ್ದರೆ, ರೈತರ ಮೊಬೈಲ್ ನಂಬರ್‌ನ್ನು ಮತ್ತು ಆಧಾರ್‌ನ್ನು ದಾಖಲಿಸಿ ಮಾಹಿತಿಯನ್ನು ಡೌನ್‌ಲೋಡ್ ಮಾಡುವುದು. ರೈತರ ಹೊಲಕ್ಕೆ ಹೋಗಿ ಸರ್ವೆ ನಂಬರ್‌ನ ಗಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸುವುದು. ಮೊದಲು ಕೃಷಿಯೇತರ ಜಾಗವನ್ನು ದಾಖಲಿಸಿ ೨ ಫೋಟೋ ತೆಗೆಯುವುದು, ನಂತರ ಪಾಲು ಬಿದ್ದ ಅಥವಾ ಕಟವಾದ ಪ್ರದೇಶದ ಮಾಹಿತಿಯನ್ನು ಸೇರಿಸಿ ೨ ಫೋಟೋ ತೆಗೆಯುವುದು, ನಂತರ ಮೊದಲು ಬಹುವಾರ್ಷಿಕ ಬೆಳೆಗಳನ್ನು ದಾಖಲಿಸಿ ನಂತರ ವಾರ್ಷಿಕ ಬೆಳೆಗಳನ್ನು ದಾಖಲಿಸುವುದು. ಎಲ್ಲಾ ಮಾಹಿತಿಯನ್ನು ಉಳಿಸಿದ ನಂತರ ಅಪ್ಲೋಡ್ ಮಾಡಿ ಮಾಹಿತಿಗಳನ್ನು ಸೇರಿಸುವುದು.

ಹೀಗೆ ಅಪ್ಲೋಡ್ ಮಾಡಲಾದ ಮಾಹಿತಿಯನ್ನು ಪ್ರತಿ ಗ್ರಾಮಕ್ಕೆ ನೇಮಿಸಲಾದ ಸರ್ಕಾರಿ ಅಧಿಕಾರಿಗಳು (ಮೇಲ್ವಿಚಾರಕರು-Suಠಿeಡಿvisoಡಿs)” ಎಂಬ ಪರಿಶೀಲಿಸಿ ಅನುಮೋದಿಸುತ್ತಾರೆ. ಈ ಸಂದರ್ಭದಲ್ಲಿ ರೈತರು ದಾಖಲಿಸಿದ ಬೆಳೆ ವಿವರಕ್ಕೂ, ಛಾಯಾಚಿತ್ರಕ್ಕೂ ತಾಳೆಯಾಗದ ಸಂದರ್ಭದಲ್ಲಿ ಮೇಲ್ವಿಚಾರಕರು ಅಂತಹ ಮಾಹಿತಿಯನ್ನು ತಿರಸ್ಕರಿಸಿ ಮರು-ಸಮೀಕ್ಷೆಗೆ ಖಾಸಗಿ ನಿವಾಸಿಗಳಿಗೆ ಕಳುಹಿಸುತ್ತಾರೆ.

ಒಂದು ವೇಳೆ, ರೈತರು ತಮ್ಮ ಸ್ನೇಹಿತರು ಅಥವಾ ಸಂಬAಧಿಕರಿಗೆ ಸಹಾಯ ಮಾಡುವುದಾದರೆ ಅವರ ಸರ್ವೆ ನಂಬರ್‌ಗಳನ್ನು ಸಹ ತಮ್ಮ ಮೊಬೈಲ್ ಆಪ್‌ನಲ್ಲಿ ಸೇರಿಸಿಕೊಂಡು ಅವರ ಜಮೀನಿನ ವಿವರ ದಾಖಲಿಸಲೂ ಸಹ ಮೊಬೈಲ್ ಆಪ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಹೀಗೆ ಸಂಗ್ರಹಿಸಲಾದ ಬೆಳೆ ಸಮೀಕ್ಷೆ ಮಾಹಿತಿಯನ್ನು ಸರ್ಕಾರದ ಯೋಜನೆಗಳಿಗೆ ಬಳಸಲಾಗುತ್ತದೆ.

ಎನ್‌ಡಿಆರ್‌ಎಫ್/ ಎಸ್‌ಡಿಆರ್‌ಎಫ್ ಅಡಿಯಲ್ಲಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ಕಷ್ಟ ಪರಿಹಾರ ವಿತರಿಸಲು. ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು. ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು. ಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯದಲ್ಲಿ. ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು.

ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ. ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ಮಾಡಲು ಈ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಜಿಲ್ಲೆಯ ರೈತರು ಈ ಅವಕಾಶದ ಸದುಪಯೋಗ ಪಡೆದುಕೊಂಡು “ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ತಾವೇ ಸರ್ಕಾರಕ್ಕೆ ನಿಗದಿತ ಸಮಯದೊಳಗೆ ವರದಿ ಮಾಡಲು” ಕೋರಿದೆ.

ಹೆಚ್ಚಿನ ಮಾಹಿತಿಗೆ ತಮ್ಮ ಗ್ರಾಮದ ಖಾಸಗೀ ನಿವಾಸಿಯನ್ನು ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು, ತಮ್ಮ ಗ್ರಾಮದ ಗ್ರಾಮ ಲೆಕ್ಕಿಗರನ್ನು ಅಥವಾ ನಾಡ ಕಚೇರಿ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕಿ ಶಬಾನಾ ಎಂ. ಶೇಖ್ ತಿಳಿಸಿದ್ದಾರೆ.