ಸುಂಟಿಕೊಪ್ಪ, ಆ. ೨೮: ಗರಗಂದೂರು ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಗುಂಡುಕುಟ್ಟಿ ಒಕ್ಕೂಟ ಪ್ರಗತಿ ಬಂಧು, ಮಹಿಳಾ ಸ್ವ ಸಹಾಯ ಸಂಘಗಳು ಮತ್ತು ನವಜೀವನ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಗರಗಂದೂರು ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಆವರಣವನ್ನು ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಒಗ್ಗೂಡಿ ದೇವಾಲಯದ ಆವರಣದಲ್ಲಿ ಬೆಳೆದು ನಿಂತಿದ ಕಾಡು ಗಿಡ ಗಂಟಿ ಕಡಿದು ಸ್ವಚ್ಛಗೊಳಿಸಿ, ದೇವಸ್ಥಾನದ ಪ್ಲಾಸ್ಟಿಕ್, ಇನ್ನಿತರ ತ್ಯಾಜ್ಯಗಳನ್ನು ವಿಲೇವಾರಿಗೊಳಿಸಿ ಶುಚಿಗೊಳಿಸಿದರು. ಸ್ವಚ್ಛತಾ ಕಾರ್ಯದ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಪುಷ್ಪಲತಾ, ಒಕ್ಕೂಟದ ಅಧ್ಯಕ್ಷರಾದ ಪುಷ್ಪ, ಗ್ರಾಮ ಪಂಚಾಯಿತಿ ಸದಸ್ಯೆ ಕುಸುಮ ಪೂವಪ್ಪ, ಉಪಾಧ್ಯಕ್ಷ ಆನಂದ, ಸೇವಾ ಪ್ರತಿನಿಧಿ ಕುಸುಮ ಸೋಮಯ್ಯ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.