ಮಡಿಕೇರಿ, ಆ. ೩೦: ಮೂಲತಃ ಜಿಲ್ಲೆಯವರಾದ ಬೆಂಗಳೂರಿನಲ್ಲಿ ನೆಲೆಸಿದ್ದ ಗೃಹಿಣಿಯೋರ್ವರು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದು, ಈ ಬಗ್ಗೆ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿತ್ತು. ಇದೀಗ ಆಕೆ ನೇಣು ಬಿಗಿದುಕೊಂಡು ಸಾವಿಗೀಡಾಗಿರುವದಾಗಿ ಮರಣೋತ್ತರ ಪರೀಕ್ಷೆಯಲ್ಲಿ ದೃಢ ಪಟ್ಟಿದೆ.

ಮೂಲತಃ ಜಿಲ್ಲೆಯ ಬಿಟ್ಟಂಗಾಲ ನಿವಾಸಿ ಪುಚ್ಚಿಮಂಡ ನೀರಜ್ ಹಾಗೂ ಪತ್ನಿ ಪ್ರಕೃತಿ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನೆಲೆಸಿದ್ದು, ಕಳೆದ ತಾ. ೧೦ರಂದು ಮನೆಯಲ್ಲಿ ಯಾರೂ ಇಲ್ಲದಿದ್ದ ಸಂದರ್ಭದಲ್ಲಿ ಪ್ರಕೃತಿ (೨೮) ಮನೆಯೊಳಗಡೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆ ಬಳಿಕ ಮೃತಳ ಪೋಷಕರು ಬರುವ ಮುನ್ನವೇ ಮೃತದೇಹವನ್ನು ಕೆಳಗಿಳಿಸಿದ್ದಲ್ಲದೆ,