ಮಡಿಕೇರಿ, ಆ. ೩೦: ಪಡಿತರ ಚೀಟಿ ಕುಟುಂಬದ ಸದಸ್ಯರುಗಳ ಇ-ಕೆವೈಸಿ (ಜೀವ ಮಾಪಕ ಮರು ದೃಡೀಕರಣ) ಕಾರ್ಯವನ್ನು ಮಾಡಲು ಸರ್ಕಾರ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಸೆಪ್ಟೆಂಬರ್ ೧ ರಿಂದ ೧೦ ರವರೆಗೆ ಇ-ಕೆವೈಸಿ (ಜೀವ ಮಾಪಕ ಮರು ದೃಡೀಕರಣ)ಯನ್ನು ಸಂಗ್ರಹಿಸಲಾಗುತ್ತದೆ.
ಪ್ರಸ್ತುತ ಸರ್ಕಾರದ ಆದೇಶದಂತೆ ಇ-ಕೆವೈಸಿ (ಜೀವ ಮಾಪಕ ಮರು ದೃಡೀಕರಣ) ಕಾರ್ಯವನ್ನು ಮತ್ತೆ ಪ್ರಾರಂಭಿಸಲಾಗಿದ್ದು, ಈ ಹಿಂದೆ ಇ-ಕೈವೈಸಿ ಮಾಡಿಸಿರದ ಅಂತ್ಯೋದಯ ಅನ್ನಯೋಜನೆ, (ಎಎವೈ) ಆದ್ಯತಾ ಪಡಿತರ ಚೀಟಿ) ಬಿಪಿಎಲ್, ಮತ್ತು ಆದ್ಯತೇತರ ಪಡಿತರ ಚೀಟಿಗಳಲ್ಲಿ (ಎಪಿಎಲ್) ಸೇರ್ಪಡೆಗೊಂಡಿರುವ ಸದಸ್ಯರುಗಳು ಕೂಡಲೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗೆ ತೆರಳಿ ತಮ್ಮ ಬೆರಳಚ್ಚನ್ನು ನೀಡಿ ಇ-ಕೆವೈಸಿಯನ್ನು ಮಾಡಿಸುವಂತೆ ಆಹಾರ ಇಲಾಖೆ ಉಪ ನಿರ್ದೇಶಕ ಗೌರವ್ ಕುಮಾರ್ ಶೆಟ್ಟಿ ಕೋರಿದ್ದಾರೆ.
ಉದ್ಯೋಗದ/ ವಿಧ್ಯಾಭ್ಯಾಸದ ಸಲುವಾಗಿ ಹಾಗೂ ಇತರೆ ಕಾರಣ ಗಳಿಂದ ಹೊರಗಿನ ಪ್ರದೇಶದಲ್ಲಿ ನೆಲೆಸಿರುವ ಪಡಿತರ ಚೀಟಿ ಸದಸ್ಯರು ಗಳು ನಿಗದಿತ ದಿನಾಂಕಗಳAದು ಬಂದು ತಮ್ಮ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸುವುದು. ೬ ವರ್ಷದೊಳಗೆ ಮಕ್ಕಳ ಆಧಾರ್ ಕಾರ್ಡ್ ಮಾಡಿಸಿದ್ದಲ್ಲಿ ಅಂತಹ ಮಕ್ಕಳ ಬೆರಳಚ್ಚು ಅಪ್ಡೇಟ್ ಆಗಿರುವುದಿಲ್ಲ. ಇದರಿಂದಾಗಿ ಇ-ಕೆಎವೈಸಿ ಮಾಡಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಬೆರಳಚ್ಚು ‘ಅಪ್ಡೇಟ್’ ಆಗದಂತಹ ಮಕ್ಕಳನ್ನು ಆಧಾರ್ ಸೆಂಟರ್ಗೆ ಕರೆದು ಬೆರಳಚ್ಚು ಅಪ್ಡೇಟ್ ಮಾಡಬೇಕು. ನಂತರವೇ ಪಡಿತರ ಚೀಟಿಯ ಇ-ಕೆವೈಸಿ ಮಾಡಿಸುವುದು. ಇ-ಕೆವೈಸಿ ಕಾರ್ಯ ವನ್ನು ಕೇವಲ ಸಂಬAಧಿಸಿದ ನ್ಯಾಯ ಬೆಲೆ ಅಂಗಡಿಗಳಲ್ಲಿಯೇ ಮಾಡತಕ್ಕದ್ದು.