ಮಡಿಕೇರಿ, ಆ. ೩೧: ನಗರೋತ್ಥಾನ ೩ನೇ ಹಂತ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾಮಗಾರಿಗಳ ಪ್ರಗತಿಯನ್ನು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಂಗಳವಾರ ಪರಿಶೀಲಿಸಿದರು. ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಕುಂಡಾಮೇಸ್ತಿç ಹಾಗೂ ಕೂಟುಹೊಳೆ ಯೋಜನಾ ಕಾಮಗಾರಿಯನ್ನು ವೀಕ್ಷಿಸಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ನಗರೋತ್ಥಾನ ಮೂರನೇ ಹಂತದ ಕಾಮಗಾರಿಗಳು ಹಾಗೂ ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಸುವ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಆದಷ್ಟು ಶೀ಼ಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬAಧಪಟ್ಟ ಎಂಜಿನಿಯರ್‌ಗಳಿಗೆ ಸೂಚಿಸಿದರು. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ೭.೫ ಲಕ್ಷ ಲೀಟರ್ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು. ಸಂಪಿಗೆಕಟ್ಟೆ ರಸ್ತೆಯಿಂದ ಬನ್ನಿಮಂಟಪದವರೆಗೆ ಚರಂಡಿ ಅಭಿವೃದ್ಧಿ ಕಾಮಗಾರಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿ, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಉಕ್ಕುಡ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ೧೨.೫ ಲಕ್ಷ ಲೀಟರ್ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿ ಪರಿಶೀಲನೆ ಮಾಡಿದರು.

ನಗರಸಭಾ ವ್ಯಾಪ್ತಿಯ ಮಹದೇವಪೇಟೆ ಇಂಟರ್ ಲಾಕ್ ಮತ್ತು ಕವರ್‌ಸ್ಲಾಬ್ ಅಳವಡಿಕೆ ಕಾಮಗಾರಿ ಹಾಗೂ ಇಂದಿರಾ ಗಾಂಧಿ ವೃತ್ತದಲ್ಲಿ ಕಾಂಕ್ರೀಟೀಕರಣ ಕಾಮಗಾರಿ ವೀಕ್ಷಿಸಿದರು. ನಂತರ ಪುಟಾಣಿ ನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ರಾಣಿಪೇಟೆ ತಡೆಗೋಡೆ ನಿರ್ಮಾಣ (ಸುಬ್ಬಮ್ಮ ಮತ್ತು ಶೇಷಮ್ಮ ಮನೆಯ ಹತ್ತಿರ) ಹಾಗೂ ರಾಜಾಸೀಟು ರಸ್ತೆಯಿಂದ ಇಂದಿರಾ ಕ್ಯಾಂಟೀನ್‌ವರೆಗೆ ರಸ್ತೆ ನಿರ್ಮಾಣ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಸ್ಟೋನ್‌ಹಿಲ್‌ನಲ್ಲಿ ನಿರ್ಮಾಣವಾಗುತ್ತಿರುವ ೨೫ ಲಕ್ಷ ಲೀಟರ್ ಟ್ಯಾಂಕ್ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ನಂತರ ಇಂದಿರಾ ನಗರ ಲಿಂಗಪ್ಪ ಅವರ ಮನೆಗೆ ಹೋಗುವ ರಸ್ತೆಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ನಡೆಯಲಿರುವ ಸಿದ್ಧತೆ ಕುರಿತು ಪರಿಶೀಲಿಸಿದರು. ಬಳಿಕ ಮುತ್ತಣ್ಣ ಸರ್ಕಲ್ ಕಾಂಕ್ರೀಟಿಕರಣ ಕಾಮಗಾರಿಯನ್ನು ಪರಿಶೀಲಿಸಿದರು.

ನಗರಾಭಿವೃದ್ಧಿ ಯೋಜನಾ ಕೋಶದ ಇಇ ಶಿವಾನಂದ, ನಗರಸಭೆಯ ಎಇಇ ರಾಜೇಂದ್ರ ಕುಮಾರ್, ಸಮಂತ್ ಕುಮಾರ್, ನಗರ ನೀರು ಸರಬರಾಜು ಒಳಚರಂಡಿ ಮಂಡಳಿಯ ಎಇಇ ಅಜಯ್, ಎಇ ಬಿಪಿನ್ ಅವರು ಕಾಮಗಾರಿಗಳ ಪ್ರಗತಿ ಬಗ್ಗೆ ಮಾಹಿತಿ ನೀಡಿದರು.